<p><strong>ಮೈಸೂರು: </strong>ಕಬ್ಬಿಗೆ ನ್ಯಾಯಯುತ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಬಾಗಿಲಿನಲ್ಲಿ ಕುಳಿತು ಪ್ರತಿಭಟಿಸಲು ಯತ್ನಿಸಿದಾಗ ಪೊಲೀಸರು ತಡೆದರು. ಈ ವೇಳೆ ಪೊಲೀಸ್ ಸಿಬ್ಬಂದಿ ರೈತರ ಕುತ್ತಿಗೆಪಟ್ಟಿ ಹಿಡಿದರು ಎಂದು ರೈತರು ಆರೋಪಿಸಿದರು.</p>.<p>ಕೋಪಗೊಂಡ ಪ್ರತಿಭಟನಕಾರರು ಸಮೀಪದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.</p>.<p>ಈ ಹಿಂದೆ ಬಾಗಿಲಿನಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದೆವು. ಆದರೆ, ಈ ಬಾರಿ ಜಿಲ್ಲಾಧಿಕಾರಿ ಇದಕ್ಕೆ ಅವ ಕಾಶ ಮಾಡಿಕೊಡುತ್ತಿಲ್ಲ. ರೈತರನ್ನು ಬಿಸಿಲಿನಲ್ಲಿ ಒಣಗಿಸುತ್ತಿದ್ದಾರೆ ಎಂದು ರೈತರು ಕಿಡಿಕಾರಿದರು. ನಂತರ, ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜು ನಾಥಸ್ವಾಮಿ ಮನವಿ ಸ್ವೀಕರಿಸಿದರು.</p>.<p class="Subhead"><strong>ಬೇಡಿಕೆ ಏನು?:</strong> ಕಬ್ಬಿನಿಂದ ಬರುವ ಸಕ್ಕರೆ ಇಳುವರಿಯನ್ನು ಸಕ್ಕರೆ ಕಾರ್ಖಾನೆಗಳು ಕಡಿಮೆ ತೋರಿಸುವ ಮೂಲಕ ಕಡಿಮೆ ಎಫ್ಆರ್ಪಿ ದರ ನಿಗದಿಯಾಗುವಂತೆ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕಡಿಮೆ ದರ ನಿಗದಿಯಾಗಿದೆ. ಸರ್ಕಾರವೇ ಒಂದು ಟನ್ ಕಬ್ಬಿಗೆ ₹ 3,050 ಉತ್ಪಾದನಾ ವೆಚ್ಚ ಎಂದು ಹೇಳಿರುವುದರಿಂದ ಕನಿಷ್ಠ ₹ 3,300 ಬೆಲೆ ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<p>ಹೊರ ಜಿಲ್ಲೆಯ ಕಬ್ಬು ತರುತ್ತಿರುವು ದರಿಂದ ಕಾರ್ಖಾನೆ ವ್ಯಾಪ್ತಿಯ ರೈತರಿಗೆ ಕಬ್ಬು ಕಟಾವು ವಿಳಂಬವಾಗುತ್ತಿದೆ. ಸರ್ಕಾರ ಎಫ್ಆರ್ಪಿ ದರ ಕುರಿತು ನಿರ್ಧಾರ ಪ್ರಕಟಿಸದೆ ವಿಳಂಬ ಧೋರಣೆ ಅನುಸರಿಸುತ್ತಿರುವುದರಿಂದ ರೈತರಿಗೆ ನಷ್ಟವಾಗುತ್ತಿದೆ ಎಂದು ಕಿಡಿಕಾರಿದರು.</p>.<p>ಪ್ರತಿ ರೈತರಿಂದ ಕನಿಷ್ಠ 100 ಕ್ವಿಂಟಲ್ ಭತ್ತವನ್ನು ಖರೀದಿ ಮಾಡಬೇಕು. ಕನಿಷ್ಠ ಬೆಂಬಲ ಬೆಲೆಗೆ ₹ 200 ಹೆಚ್ಚುವರಿ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಮುಖಂಡರಾದ ಕೆಆರ್ ಎಸ್ ರಾಮೇಗೌಡ, ಗಳಿಗರ ಹುಂಡಿ ವೆಂಕಟೇಶ್, ಬರಡನಪುರ ನಾಗರಾಜ್, ದೊಡ್ಡಕಾಟೂರು ಮಹದೇವಸ್ವಾಮಿ ಇದ್ದರು.</p>.<p><strong>ಸೇವಾ ಘಟಕ ಆರಂಭಕ್ಕೆ ಒತ್ತಾಯ</strong></p>.<p>ಗ್ರೀನ್ಬಡ್ಸ್ ಠೇವಣಿದಾರರ ನೆರವಿಗಾಗಿ ಇಲ್ಲಿನ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಸ್ಥಾಪನೆಯಾಗಿ ಈಗ ಸ್ಥಗಿತಗೊಂಡಿರುವ ಸೇವಾಕೇಂದ್ರವನ್ನು ಪುನರ್ ಆರಂಭಿಸಬೇಕು ಎಂದು ಒತ್ತಾಯಿಸಿ ಗ್ರೀನ್ಬಡ್ಸ್ ಕಾರ್ಯಕರ್ತರು ಮತ್ತು ಠೇವಣಿದಾರರ ರಕ್ಷಣಾ ಸಮಿತಿ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.</p>.<p>ಕೋವಿಡ್ ಹಾಗೂ ಇನ್ನಿತರ ಕಾರಣಗಳಿಂದ ಸೇವಾ ಕೇಂದ್ರವನ್ನು ಸ್ಥಗಿತಗೊಳಿಸಿರುವುದರಿಂದ ಠೇವಣಿದಾರರಿಗೆ ತೊಂದರೆಯಾಗಿದೆ. ಕೂಡಲೇ ಈ ಸೇವಾ ಕೇಂದ್ರ ಆರಂಭಿಸುವ ಮೂಲಕ ನೊಂದವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಭಟನೆಯಲ್ಲಿದ್ದ ಇತರ ರೈತರೂ ದನಿಗೂಡಿಸಿದರು.</p>.<p>ಸಮಿತಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎ.ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕಬ್ಬಿಗೆ ನ್ಯಾಯಯುತ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಬಾಗಿಲಿನಲ್ಲಿ ಕುಳಿತು ಪ್ರತಿಭಟಿಸಲು ಯತ್ನಿಸಿದಾಗ ಪೊಲೀಸರು ತಡೆದರು. ಈ ವೇಳೆ ಪೊಲೀಸ್ ಸಿಬ್ಬಂದಿ ರೈತರ ಕುತ್ತಿಗೆಪಟ್ಟಿ ಹಿಡಿದರು ಎಂದು ರೈತರು ಆರೋಪಿಸಿದರು.</p>.<p>ಕೋಪಗೊಂಡ ಪ್ರತಿಭಟನಕಾರರು ಸಮೀಪದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.</p>.<p>ಈ ಹಿಂದೆ ಬಾಗಿಲಿನಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದೆವು. ಆದರೆ, ಈ ಬಾರಿ ಜಿಲ್ಲಾಧಿಕಾರಿ ಇದಕ್ಕೆ ಅವ ಕಾಶ ಮಾಡಿಕೊಡುತ್ತಿಲ್ಲ. ರೈತರನ್ನು ಬಿಸಿಲಿನಲ್ಲಿ ಒಣಗಿಸುತ್ತಿದ್ದಾರೆ ಎಂದು ರೈತರು ಕಿಡಿಕಾರಿದರು. ನಂತರ, ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜು ನಾಥಸ್ವಾಮಿ ಮನವಿ ಸ್ವೀಕರಿಸಿದರು.</p>.<p class="Subhead"><strong>ಬೇಡಿಕೆ ಏನು?:</strong> ಕಬ್ಬಿನಿಂದ ಬರುವ ಸಕ್ಕರೆ ಇಳುವರಿಯನ್ನು ಸಕ್ಕರೆ ಕಾರ್ಖಾನೆಗಳು ಕಡಿಮೆ ತೋರಿಸುವ ಮೂಲಕ ಕಡಿಮೆ ಎಫ್ಆರ್ಪಿ ದರ ನಿಗದಿಯಾಗುವಂತೆ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕಡಿಮೆ ದರ ನಿಗದಿಯಾಗಿದೆ. ಸರ್ಕಾರವೇ ಒಂದು ಟನ್ ಕಬ್ಬಿಗೆ ₹ 3,050 ಉತ್ಪಾದನಾ ವೆಚ್ಚ ಎಂದು ಹೇಳಿರುವುದರಿಂದ ಕನಿಷ್ಠ ₹ 3,300 ಬೆಲೆ ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<p>ಹೊರ ಜಿಲ್ಲೆಯ ಕಬ್ಬು ತರುತ್ತಿರುವು ದರಿಂದ ಕಾರ್ಖಾನೆ ವ್ಯಾಪ್ತಿಯ ರೈತರಿಗೆ ಕಬ್ಬು ಕಟಾವು ವಿಳಂಬವಾಗುತ್ತಿದೆ. ಸರ್ಕಾರ ಎಫ್ಆರ್ಪಿ ದರ ಕುರಿತು ನಿರ್ಧಾರ ಪ್ರಕಟಿಸದೆ ವಿಳಂಬ ಧೋರಣೆ ಅನುಸರಿಸುತ್ತಿರುವುದರಿಂದ ರೈತರಿಗೆ ನಷ್ಟವಾಗುತ್ತಿದೆ ಎಂದು ಕಿಡಿಕಾರಿದರು.</p>.<p>ಪ್ರತಿ ರೈತರಿಂದ ಕನಿಷ್ಠ 100 ಕ್ವಿಂಟಲ್ ಭತ್ತವನ್ನು ಖರೀದಿ ಮಾಡಬೇಕು. ಕನಿಷ್ಠ ಬೆಂಬಲ ಬೆಲೆಗೆ ₹ 200 ಹೆಚ್ಚುವರಿ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಮುಖಂಡರಾದ ಕೆಆರ್ ಎಸ್ ರಾಮೇಗೌಡ, ಗಳಿಗರ ಹುಂಡಿ ವೆಂಕಟೇಶ್, ಬರಡನಪುರ ನಾಗರಾಜ್, ದೊಡ್ಡಕಾಟೂರು ಮಹದೇವಸ್ವಾಮಿ ಇದ್ದರು.</p>.<p><strong>ಸೇವಾ ಘಟಕ ಆರಂಭಕ್ಕೆ ಒತ್ತಾಯ</strong></p>.<p>ಗ್ರೀನ್ಬಡ್ಸ್ ಠೇವಣಿದಾರರ ನೆರವಿಗಾಗಿ ಇಲ್ಲಿನ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಸ್ಥಾಪನೆಯಾಗಿ ಈಗ ಸ್ಥಗಿತಗೊಂಡಿರುವ ಸೇವಾಕೇಂದ್ರವನ್ನು ಪುನರ್ ಆರಂಭಿಸಬೇಕು ಎಂದು ಒತ್ತಾಯಿಸಿ ಗ್ರೀನ್ಬಡ್ಸ್ ಕಾರ್ಯಕರ್ತರು ಮತ್ತು ಠೇವಣಿದಾರರ ರಕ್ಷಣಾ ಸಮಿತಿ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.</p>.<p>ಕೋವಿಡ್ ಹಾಗೂ ಇನ್ನಿತರ ಕಾರಣಗಳಿಂದ ಸೇವಾ ಕೇಂದ್ರವನ್ನು ಸ್ಥಗಿತಗೊಳಿಸಿರುವುದರಿಂದ ಠೇವಣಿದಾರರಿಗೆ ತೊಂದರೆಯಾಗಿದೆ. ಕೂಡಲೇ ಈ ಸೇವಾ ಕೇಂದ್ರ ಆರಂಭಿಸುವ ಮೂಲಕ ನೊಂದವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಭಟನೆಯಲ್ಲಿದ್ದ ಇತರ ರೈತರೂ ದನಿಗೂಡಿಸಿದರು.</p>.<p>ಸಮಿತಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎ.ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>