<p><strong>ಮೈಸೂರು</strong>: ‘ರೈತರ ಆತ್ಮಹತ್ಯೆ ದೇಶಕ್ಕೆ ಅವಮಾನ. ರೈತರು ಕೃಷಿ ಭೂಮಿಯಲ್ಲೇ ಉಳಿಯುತ್ತೇವೆ ಎನ್ನುವ ವಿಶ್ವಾಸ ತುಂಬುವ ಕೆಲಸ ಮಾಡಲಾಗುವುದು’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ<br />ತಿಳಿಸಿದರು.</p>.<p>ಇಲ್ಲಿನ ರಿಯೊ ಮೆರಿಡಿಯನ್ ಹೋಟೆಲ್ನಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ‘ಜನಾಶೀರ್ವಾದ ಯಾತ್ರೆ’ಯಲ್ಲಿ ಅವರು ಮಾತನಾಡಿದರು.</p>.<p>‘ಕೃಷಿಯ ಜತೆಗೆ ಹೈನುಗಾರಿಕೆ, ಜೇನುಸಾಕಾಣಿಕೆ, ಕುಕ್ಕುಟ್ಟೋದ್ಯಮ ಸೇರಿದಂತೆ ಉಪಕಸುಬುಗಳಲ್ಲಿ ತೊಡಗಿರುವ ರೈತರ ಆತ್ಮಹತ್ಯೆ ತೀರಾ ಕಡಿಮೆ ಇದೆ ಎಂದು ಅಧ್ಯಯನಗಳು ತಿಳಿಸಿವೆ. ರೈತರು ಕೇವಲ ಕೃಷಿ ಮೇಲೆ ಮಾತ್ರ ಅವಲಂಬಿತರಾಗದೇ ಇಂತಹ ಉಪಕಸುಬುಗಳು ಹಾಗೂ ಸಮಗ್ರ ಕೃಷಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಕರೆ<br />ನೀಡಿದರು.</p>.<p>‘ಡಾ.ಖಾದರ್ ಸಿರಿಧಾನ್ಯಗಳ ಮಹತ್ವ ಸಾರಿದರು. ಈಗ ವಿಶ್ವಸಂಸ್ಥೆಯೂ ಮಾನ್ಯತೆ ನೀಡಿದೆ. ಕೇಂದ್ರ ಸರ್ಕಾರ ಜಾರಿಗಳಿಸಿರುವ ಕಾಯ್ದೆಗಳು ರೈತಪರವಾಗಿದೆ. ನಿಜವಾದ ರೈತರಿಂದ ವಿರೋಧ ವ್ಯಕ್ತವಾಗಿಲ್ಲ’<br />ಎಂದರು.</p>.<p>‘ನರೇಂದ್ರ ಮೋದಿ ಈಗ ವಿಶ್ವಸಂಸ್ಥೆಗೆ ಹೋದರೆ ಎಲ್ಲ ದೇಶಗಳೂ ಗೌರವ ಕೊಡುತ್ತಿವೆ. ಹಿಂದಿನ ಪ್ರಧಾನಿಗೆ ಗೌರವ ಸಿಗುತ್ತಿರಲಿಲ್ಲ. ಮೋದಿ ಅಧಿಕಾರದಿಂದ ನಿರ್ಗಮಿಸುವಾಗ ಕೇವಲ ತಮ್ಮ ಬಟ್ಟೆಗಳಿರುವ ಸೂಟ್ಕೇಸ್ನೊಂದಿಗೆ ಮಾತ್ರ ನಿರ್ಗಮಿಸುತ್ತಾರೆ. ಭ್ರಷ್ಟಾಚಾರ ನಡೆಸಿದವರಿಗೆ ಇವರನ್ನು ಟೀಕಿಸುವ ಹಕ್ಕಿಲ್ಲ’ ಎಂದು<br />ಅವರು ಹೇಳಿದರು.</p>.<p>‘ಬಿಜೆಪಿ ಕಚೇರಿಯಲ್ಲಿ 45 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ದುಡಿದ ರಾಜಾಚಾರ್ಯ ಅವರು ಯಾವ ಅಧಿಕಾರವನ್ನೂ ಅನುಭವಿಸಲಿಲ್ಲ. ಪಕ್ಷಕ್ಕಾಗಿ ದುಡಿಯುತ್ತಲೇ ಕಚೇರಿಯಲ್ಲೇ ನಿಧನರಾದರು. ಇದು ಬಿಜೆಪಿ ಕಾರ್ಯಕರ್ತರ ವರ್ತನೆ’ ಎಂದು ತಿಳಿಸಿದರು.</p>.<p>‘ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ತನ್ನ ಸಂಪುಟದ ಸದಸ್ಯರನ್ನು ಲೋಕಸಭೆಗೆ ಪರಿಚಯಿಸಿಕೊಡಲು ವಿಪಕ್ಷಗಳು ಪ್ರಧಾನಿಯವರಿಗೆ ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ, ಜನರ ಮುಂದೆ ಹೊಸ ಮಂತ್ರಿಗಳನ್ನು ಪರಿಚಯಿಸಿಕೊಡಲು ಈ ಯಾತ್ರೆ ಆಯೋಜಿಸಿದ್ದೇವೆ’ ಎಂದು ಹೇಳಿದರು.</p>.<p>ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜುಗೌಡ, ಬಿಜೆಪಿ ಜಿಲ್ಲಾ (ಗ್ರಾಮಾಂತರ) ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರ ಘಟಕದ ಅಧ್ಯಕ್ಷ ಶ್ರೀವತ್ಸ, ಮುಖಂಡರಾದ ಸಿದ್ದರಾಜು, ಮೈ.ವಿ.ರವಿಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ರೈತರ ಆತ್ಮಹತ್ಯೆ ದೇಶಕ್ಕೆ ಅವಮಾನ. ರೈತರು ಕೃಷಿ ಭೂಮಿಯಲ್ಲೇ ಉಳಿಯುತ್ತೇವೆ ಎನ್ನುವ ವಿಶ್ವಾಸ ತುಂಬುವ ಕೆಲಸ ಮಾಡಲಾಗುವುದು’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ<br />ತಿಳಿಸಿದರು.</p>.<p>ಇಲ್ಲಿನ ರಿಯೊ ಮೆರಿಡಿಯನ್ ಹೋಟೆಲ್ನಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ‘ಜನಾಶೀರ್ವಾದ ಯಾತ್ರೆ’ಯಲ್ಲಿ ಅವರು ಮಾತನಾಡಿದರು.</p>.<p>‘ಕೃಷಿಯ ಜತೆಗೆ ಹೈನುಗಾರಿಕೆ, ಜೇನುಸಾಕಾಣಿಕೆ, ಕುಕ್ಕುಟ್ಟೋದ್ಯಮ ಸೇರಿದಂತೆ ಉಪಕಸುಬುಗಳಲ್ಲಿ ತೊಡಗಿರುವ ರೈತರ ಆತ್ಮಹತ್ಯೆ ತೀರಾ ಕಡಿಮೆ ಇದೆ ಎಂದು ಅಧ್ಯಯನಗಳು ತಿಳಿಸಿವೆ. ರೈತರು ಕೇವಲ ಕೃಷಿ ಮೇಲೆ ಮಾತ್ರ ಅವಲಂಬಿತರಾಗದೇ ಇಂತಹ ಉಪಕಸುಬುಗಳು ಹಾಗೂ ಸಮಗ್ರ ಕೃಷಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಕರೆ<br />ನೀಡಿದರು.</p>.<p>‘ಡಾ.ಖಾದರ್ ಸಿರಿಧಾನ್ಯಗಳ ಮಹತ್ವ ಸಾರಿದರು. ಈಗ ವಿಶ್ವಸಂಸ್ಥೆಯೂ ಮಾನ್ಯತೆ ನೀಡಿದೆ. ಕೇಂದ್ರ ಸರ್ಕಾರ ಜಾರಿಗಳಿಸಿರುವ ಕಾಯ್ದೆಗಳು ರೈತಪರವಾಗಿದೆ. ನಿಜವಾದ ರೈತರಿಂದ ವಿರೋಧ ವ್ಯಕ್ತವಾಗಿಲ್ಲ’<br />ಎಂದರು.</p>.<p>‘ನರೇಂದ್ರ ಮೋದಿ ಈಗ ವಿಶ್ವಸಂಸ್ಥೆಗೆ ಹೋದರೆ ಎಲ್ಲ ದೇಶಗಳೂ ಗೌರವ ಕೊಡುತ್ತಿವೆ. ಹಿಂದಿನ ಪ್ರಧಾನಿಗೆ ಗೌರವ ಸಿಗುತ್ತಿರಲಿಲ್ಲ. ಮೋದಿ ಅಧಿಕಾರದಿಂದ ನಿರ್ಗಮಿಸುವಾಗ ಕೇವಲ ತಮ್ಮ ಬಟ್ಟೆಗಳಿರುವ ಸೂಟ್ಕೇಸ್ನೊಂದಿಗೆ ಮಾತ್ರ ನಿರ್ಗಮಿಸುತ್ತಾರೆ. ಭ್ರಷ್ಟಾಚಾರ ನಡೆಸಿದವರಿಗೆ ಇವರನ್ನು ಟೀಕಿಸುವ ಹಕ್ಕಿಲ್ಲ’ ಎಂದು<br />ಅವರು ಹೇಳಿದರು.</p>.<p>‘ಬಿಜೆಪಿ ಕಚೇರಿಯಲ್ಲಿ 45 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ದುಡಿದ ರಾಜಾಚಾರ್ಯ ಅವರು ಯಾವ ಅಧಿಕಾರವನ್ನೂ ಅನುಭವಿಸಲಿಲ್ಲ. ಪಕ್ಷಕ್ಕಾಗಿ ದುಡಿಯುತ್ತಲೇ ಕಚೇರಿಯಲ್ಲೇ ನಿಧನರಾದರು. ಇದು ಬಿಜೆಪಿ ಕಾರ್ಯಕರ್ತರ ವರ್ತನೆ’ ಎಂದು ತಿಳಿಸಿದರು.</p>.<p>‘ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ತನ್ನ ಸಂಪುಟದ ಸದಸ್ಯರನ್ನು ಲೋಕಸಭೆಗೆ ಪರಿಚಯಿಸಿಕೊಡಲು ವಿಪಕ್ಷಗಳು ಪ್ರಧಾನಿಯವರಿಗೆ ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ, ಜನರ ಮುಂದೆ ಹೊಸ ಮಂತ್ರಿಗಳನ್ನು ಪರಿಚಯಿಸಿಕೊಡಲು ಈ ಯಾತ್ರೆ ಆಯೋಜಿಸಿದ್ದೇವೆ’ ಎಂದು ಹೇಳಿದರು.</p>.<p>ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜುಗೌಡ, ಬಿಜೆಪಿ ಜಿಲ್ಲಾ (ಗ್ರಾಮಾಂತರ) ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರ ಘಟಕದ ಅಧ್ಯಕ್ಷ ಶ್ರೀವತ್ಸ, ಮುಖಂಡರಾದ ಸಿದ್ದರಾಜು, ಮೈ.ವಿ.ರವಿಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>