<p><strong>ಮೈಸೂರು: </strong>ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ದೊಡ್ಡಮುಲಗೂಡು ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಅವರ ಪತ್ನಿ ಶಾಂತಮ್ಮ (23) ಮೃತದೇಹವು ಅವರ ನಿವಾಸದಲ್ಲಿ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.</p>.<p>ಮನೆಯ ಬಾಗಿಲ ಬಳಿಯೇ ಮೃತದೇಹ ಸಿಕ್ಕಿದ್ದು, ಪತಿ ಸೇರಿದಂತೆ ಮನೆಯಲ್ಲಿದ್ದ ಇತರೆ ಸದಸ್ಯರು ಪರಾರಿಯಾಗಿದ್ದಾರೆ. ಈ ಕುರಿತು ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಂಜನಗೂಡು ಅಶೋಕಪುರಂನ ಶಾಂತಮ್ಮ ಅವರು ಕಳೆದ 2 ವರ್ಷಗಳ ಹಿಂದೆಯಷ್ಟೇ ರಮೇಶ್ ಅವರನ್ನು ವಿವಾಹವಾಗಿದ್ದರು. ಸುಟ್ಟ ಸ್ಥಿತಿಯಲ್ಲಿ ಇವರ ಮೃತದೇಹ ಮನೆಯ ಬಾಗಿಲ ಬಳಿಯೇ ಕಾಣಿಸುತ್ತಿದ್ದಂತೆ ಗ್ರಾಮಸ್ಥರು ಸಂಜೆ 4 ಗಂಟೆ ಹೊತ್ತಿಗೆ ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ತಕ್ಷಣ ಬಂದ ಪೊಲೀಸರು ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದು, ಪತಿ ರಮೇಶ್ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.</p>.<p>ಡಿವೈಎಸ್ಪಿ ಪ್ರಭಾಕರ್ರಾವ್ ಶಿಂಧೆ, ಸರ್ಕಲ್ ಇನ್ಸ್ಪೆಕ್ಟರ್ ಲವ, ಬನ್ನೂರು ಠಾಣೆ ಎಎಸ್ಐ ರಂಗಸ್ವಾಮಿ, ನಾರಾಯಣ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ದೊಡ್ಡಮುಲಗೂಡು ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಅವರ ಪತ್ನಿ ಶಾಂತಮ್ಮ (23) ಮೃತದೇಹವು ಅವರ ನಿವಾಸದಲ್ಲಿ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.</p>.<p>ಮನೆಯ ಬಾಗಿಲ ಬಳಿಯೇ ಮೃತದೇಹ ಸಿಕ್ಕಿದ್ದು, ಪತಿ ಸೇರಿದಂತೆ ಮನೆಯಲ್ಲಿದ್ದ ಇತರೆ ಸದಸ್ಯರು ಪರಾರಿಯಾಗಿದ್ದಾರೆ. ಈ ಕುರಿತು ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಂಜನಗೂಡು ಅಶೋಕಪುರಂನ ಶಾಂತಮ್ಮ ಅವರು ಕಳೆದ 2 ವರ್ಷಗಳ ಹಿಂದೆಯಷ್ಟೇ ರಮೇಶ್ ಅವರನ್ನು ವಿವಾಹವಾಗಿದ್ದರು. ಸುಟ್ಟ ಸ್ಥಿತಿಯಲ್ಲಿ ಇವರ ಮೃತದೇಹ ಮನೆಯ ಬಾಗಿಲ ಬಳಿಯೇ ಕಾಣಿಸುತ್ತಿದ್ದಂತೆ ಗ್ರಾಮಸ್ಥರು ಸಂಜೆ 4 ಗಂಟೆ ಹೊತ್ತಿಗೆ ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ತಕ್ಷಣ ಬಂದ ಪೊಲೀಸರು ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದು, ಪತಿ ರಮೇಶ್ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.</p>.<p>ಡಿವೈಎಸ್ಪಿ ಪ್ರಭಾಕರ್ರಾವ್ ಶಿಂಧೆ, ಸರ್ಕಲ್ ಇನ್ಸ್ಪೆಕ್ಟರ್ ಲವ, ಬನ್ನೂರು ಠಾಣೆ ಎಎಸ್ಐ ರಂಗಸ್ವಾಮಿ, ನಾರಾಯಣ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>