ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಯಲು ಮೂತ್ರ ಮಾಡಿದ್ದಕ್ಕೆ ₹ 1 ಸಾವಿರ ದಂಡ

ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧಾರ
Last Updated 12 ಡಿಸೆಂಬರ್ 2019, 10:02 IST
ಅಕ್ಷರ ಗಾತ್ರ

ಮೈಸೂರು: ಬಯಲಿನಲ್ಲಿ ಮೂತ್ರ ವಿಸರ್ಜಿಸಿ, ಕೇಳಲು ಬಂದ ಮಹಿಳಾ ಆರೋಗ್ಯ ನಿರೀಕ್ಷಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಚೇತನ್ ಎಂಬ ಯುವಕನಿಗೆ ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ ಡಾ.ಜಯಂತ್ ₹ 1 ಸಾವಿರ ದಂಡ ವಿಧಿಸಿದ್ದಾರೆ.

ತಿಲಕ್‌ನಗರದ ವಲಯ ಕಚೇರಿ ಹಿಂಭಾಗ ಬಯಲಿನಲ್ಲಿ ಈತ ಮೂತ್ರ ವಿಸರ್ಜಿಸುತ್ತಿರುವುದನ್ನು ಮಹಿಳಾ ಆರೋಗ್ಯ ನಿರೀಕ್ಷಕಿಯೊಬ್ಬರು ಪ್ರಶ್ನಿಸಿದ್ದಾರೆ. ಇವರೊಂದಿಗೆ ಅಸಭ್ಯವಾಗಿ ಮಾತನಾಡಿದ ಈತ ‘ಏನು ಮಾಡುತ್ತೀರಿ’ ಎಂದು ಸವಾಲೆಸೆದಿದ್ದಾನೆ.

ಕೂಡಲೇ ವಿಷಯವನ್ನು ಮುಖ್ಯ ಆರೋಗ್ಯಾಧಿಕಾರಿ ಡಾ.ಜಯಂತ್ ಅವರ ಗಮನಕ್ಕೆ ತಂದಿದ್ದಾರೆ. ‘ಅಭಯ್’ ರಕ್ಷಣಾ ತಂಡದೊಂದಿಗೆ ಸ್ಥಳಕ್ಕೆ ಬಂದ ಜಯಂತ್ ಚೇತನ್‌ನನ್ನು ಮಂಡಿ ಠಾಣೆಗೆ ಕರೆದೋಯ್ದಿದ್ದಾರೆ.

ವಿಚಾರಣೆ ವೇಳೆ ಮಾಡಿದ ತಪ್ಪಿಗೆ ಚೇತನ್ ಕ್ಷಮೆ ಯಾಚಿಸಿದ್ದಾನೆ. ನಂತರ, ಬಯಲು ಮೂತ್ರ ವಿಸರ್ಜನೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ₹ 1 ಸಾವಿರ ದಂಡ ವಿಧಿಸಲಾಗಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಾ.ಜಯಂತ್, ‘ಸಾಮಾನ್ಯವಾಗಿ ಬಯಲಿನಲ್ಲಿ ಮೂತ್ರ ಮಾಡಿದವರಿಗೆ ₹ 100ರಿಂದ ₹ 200ರವರೆಗೆ ದಂಡ ವಿಧಿಸಲಾಗುತ್ತದೆ. ಆದರೆ, ಸಹಕಾರ ನೀಡದೇ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ₹ 1 ಸಾವಿರ ದಂಡ ವಿಧಿಸಲಾಗುತ್ತದೆ. ಇನ್ನು ಮುಂದೆ ಎಲ್ಲೆಡೆ ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡುವವರ ವಿರುದ್ಧ ದಂಡ ವಿಧಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT