ನಾಗರಹೊಳೆ ಹುಲಿ ಸಂರಕ್ಷಣಾ ಅಧಿಕಾರಿ ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ಎಸಿಎಫ್ ಮಹದೇವು, ಆರ್ಎಫ್ಒ ಗಳಾದ ಸಿದ್ದರಾಜು, ಮಧು, ಸಂತೋಷ ಹೂಗಾರ್, ಅರಣ್ಯ ಪರಿಪಾಲಕರಾದ ಕೃತಿಕಾ, ಪೂರ್ವಜ್ ವಿಶ್ವನಾಥ್, ಅರಣ್ಯ ಇಲಾಖೆ ಸಿಬ್ಬಂದಿ, ಸರ್ಕಾರಿ ಮತ್ತು ಖಾಸಗಿ ರೆಸಾರ್ಟ್ ಸಿಬ್ಬಂದಿ, ಸ್ಥಳೀಯರು ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಜನರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದರು.