<p><strong>ಮೈಸೂರು:</strong> ನಗರದ ದೇವರಾಜ ಮೊಹಲ್ಲಾದ ಶಿವಯ್ಯನ ಮಠದ ರಸ್ತೆಯಲ್ಲಿರುವ ಭಾಗ್ಯ ಪ್ರಾವಿಷನ್ ಸ್ಟೋರ್ನ ಗೋದಾಮಿಗೆ ಭಾನುವಾರ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಅಂದಾಜು ₹ 2 ಲಕ್ಷ ನಷ್ಟವಾಗಿದೆ ಎನ್ನಲಾಗಿದೆ.</p>.<p>ಭಾಗ್ಯ ಪ್ರಾವಿಷನ್ ಸ್ಟೋರ್ನ ಮೇಲ್ಭಾಗದಲ್ಲೇ ಗೋದಾಮು ಇತ್ತು. ಕೆಲ ದಿನಗಳ ಹಿಂದಷ್ಟೇ ಎಲ್ಲವನ್ನೂ ಖಾಲಿ ಮಾಡಿದ್ದರು.</p>.<p>ಬೆಂಕಿ ತಗುಲಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನದೊಂದಿಗೆ ಬಂದ ಸಿಬ್ಬಂದಿ, ಒಂದು ಗಂಟೆಗೂ ಹೆಚ್ಚಿನ ಅವಧಿ ಬೆಂಕಿ ನಂದಿಸಲು ಹರ ಸಾಹಸ ನಡೆಸಿದರು. ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿಯ ಕೆನ್ನಾಲಿಗೆ ತಗುಲದಂತೆ ನೋಡಿಕೊಂಡರು ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಅಂಗಡಿ, ಗೋದಾಮು ವೆಂಕಟೇಶ್ ಎಂಬುವರಿಗೆ ಸೇರಿದ್ದು. ಬೆಂಕಿ ಹೇಗೆ ತಗುಲಿತು ಎಂಬುದು ಗೊತ್ತಾಗಿಲ್ಲ. ಅಂಗಡಿಯಲ್ಲಿದ್ದ ₹ 50 ಸಾವಿರ ಮೌಲ್ಯದ ವಸ್ತುಗಳು ಸೇರಿದಂತೆ ಕಟ್ಟಡಕ್ಕೂ ಬೆಂಕಿ ಹಾನಿಯನ್ನುಂಟು ಮಾಡಿದೆ. ಕನಿಷ್ಠ ₹ 2 ಲಕ್ಷ ನಷ್ಟವಾಗಿದೆ ಎಂದು ಮಾಲೀಕರು ದೂರು ನೀಡಿದ್ದಾರೆ’ ಎಂದು ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಸನ್ನಕುಮಾರ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದ ದೇವರಾಜ ಮೊಹಲ್ಲಾದ ಶಿವಯ್ಯನ ಮಠದ ರಸ್ತೆಯಲ್ಲಿರುವ ಭಾಗ್ಯ ಪ್ರಾವಿಷನ್ ಸ್ಟೋರ್ನ ಗೋದಾಮಿಗೆ ಭಾನುವಾರ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಅಂದಾಜು ₹ 2 ಲಕ್ಷ ನಷ್ಟವಾಗಿದೆ ಎನ್ನಲಾಗಿದೆ.</p>.<p>ಭಾಗ್ಯ ಪ್ರಾವಿಷನ್ ಸ್ಟೋರ್ನ ಮೇಲ್ಭಾಗದಲ್ಲೇ ಗೋದಾಮು ಇತ್ತು. ಕೆಲ ದಿನಗಳ ಹಿಂದಷ್ಟೇ ಎಲ್ಲವನ್ನೂ ಖಾಲಿ ಮಾಡಿದ್ದರು.</p>.<p>ಬೆಂಕಿ ತಗುಲಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನದೊಂದಿಗೆ ಬಂದ ಸಿಬ್ಬಂದಿ, ಒಂದು ಗಂಟೆಗೂ ಹೆಚ್ಚಿನ ಅವಧಿ ಬೆಂಕಿ ನಂದಿಸಲು ಹರ ಸಾಹಸ ನಡೆಸಿದರು. ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿಯ ಕೆನ್ನಾಲಿಗೆ ತಗುಲದಂತೆ ನೋಡಿಕೊಂಡರು ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಅಂಗಡಿ, ಗೋದಾಮು ವೆಂಕಟೇಶ್ ಎಂಬುವರಿಗೆ ಸೇರಿದ್ದು. ಬೆಂಕಿ ಹೇಗೆ ತಗುಲಿತು ಎಂಬುದು ಗೊತ್ತಾಗಿಲ್ಲ. ಅಂಗಡಿಯಲ್ಲಿದ್ದ ₹ 50 ಸಾವಿರ ಮೌಲ್ಯದ ವಸ್ತುಗಳು ಸೇರಿದಂತೆ ಕಟ್ಟಡಕ್ಕೂ ಬೆಂಕಿ ಹಾನಿಯನ್ನುಂಟು ಮಾಡಿದೆ. ಕನಿಷ್ಠ ₹ 2 ಲಕ್ಷ ನಷ್ಟವಾಗಿದೆ ಎಂದು ಮಾಲೀಕರು ದೂರು ನೀಡಿದ್ದಾರೆ’ ಎಂದು ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಸನ್ನಕುಮಾರ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>