ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುದ್ಧನಗರದ ನಾಮಫಲಕಕ್ಕೆ ಬೆಂಕಿ

Last Updated 19 ನವೆಂಬರ್ 2020, 1:09 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಮಾನಂದವಾಡಿ ರಸ್ತೆಯ ನೆಲ್ಲೂರು ಶೆಡ್‌ ಬಡಾವಣೆಯಲ್ಲಿ ಅಳವಡಿಸಿದ್ದ ಬುದ್ಧನಗರ ಎಂಬ ನಾಮಫಲಕಕ್ಕೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿರೂಪಗೊಳಿಸಿದ್ದಾರೆ.

ಈ ನಾಮಫಲಕದಲ್ಲಿ ಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಬಾಬುಜಗಜೀವನರಾಂ ಅವರ ಭಾವಚಿತ್ರಗಳೂ ಇದ್ದು, ಇವೂ ಹಾನಿಗೀಡಾಗಿವೆ.ಅ. 12ರಂದು ನೆಲ್ಲೂರು ಶೆಡ್‌ ಎಂಬ ನಾಮಫಲಕಕ್ಕೆ ಬದಲಾಗಿ ಬುದ್ಧನಗರ ಎಂಬ ನಾಮಫಲಕವನ್ನು ಅಳವಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಶೋಕಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ಬಾಳದಲ್ಲಿ ಕಳ್ಳತನ

ಮೈಸೂರು: ಇಲ್ಲಿನ ಹೆಬ್ಬಾಳದ ಲಕ್ಷ್ಮೀಕಾಂತನಗರದ ನಿವಾಸಿ ಪುನೀತ್‌ ಎಂಬುವವರ ಮನೆಯಲ್ಲಿ ಕಳ್ಳರು ₹ 70 ಸಾವಿರ ನಗದನ್ನು ಕಳವು ಮಾಡಿದ್ದಾರೆ.

ಪುನೀತ್ ಅವರು ನ. 14ರಂದು ಮನೆಗೆ ಬೀಗ ಹಾಕಿಕೊಂಡು ಸಂಸಾರ ಸಮೇತರಾಗಿ ದೀಪಾವಳಿ ಹಬ್ಬಕ್ಕಾಗಿ ಊರಿಗೆ ಹೋಗಿದ್ದರು. ಬುಧವಾರ ಬೆಳಿಗ್ಗೆ ಮನೆಗೆ ಬಂದಾಗ ಡೋರ್‌ಲಾಕ್ ಮುರಿದಿರುವುದು ಗೊತ್ತಾಗಿದೆ. ಮನೆಯ ಬೀರುವಿನಲ್ಲಿಟ್ಟಿದ್ದ ₹ 70 ಸಾವಿರ ನಗದು ಕಳವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT