<p><strong>ಮೈಸೂರು: </strong>ಇಲ್ಲಿನ ಮಾನಂದವಾಡಿ ರಸ್ತೆಯ ನೆಲ್ಲೂರು ಶೆಡ್ ಬಡಾವಣೆಯಲ್ಲಿ ಅಳವಡಿಸಿದ್ದ ಬುದ್ಧನಗರ ಎಂಬ ನಾಮಫಲಕಕ್ಕೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿರೂಪಗೊಳಿಸಿದ್ದಾರೆ.</p>.<p>ಈ ನಾಮಫಲಕದಲ್ಲಿ ಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಬಾಬುಜಗಜೀವನರಾಂ ಅವರ ಭಾವಚಿತ್ರಗಳೂ ಇದ್ದು, ಇವೂ ಹಾನಿಗೀಡಾಗಿವೆ.ಅ. 12ರಂದು ನೆಲ್ಲೂರು ಶೆಡ್ ಎಂಬ ನಾಮಫಲಕಕ್ಕೆ ಬದಲಾಗಿ ಬುದ್ಧನಗರ ಎಂಬ ನಾಮಫಲಕವನ್ನು ಅಳವಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಶೋಕಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಹೆಬ್ಬಾಳದಲ್ಲಿ ಕಳ್ಳತನ</strong></p>.<p><strong>ಮೈಸೂರು:</strong> ಇಲ್ಲಿನ ಹೆಬ್ಬಾಳದ ಲಕ್ಷ್ಮೀಕಾಂತನಗರದ ನಿವಾಸಿ ಪುನೀತ್ ಎಂಬುವವರ ಮನೆಯಲ್ಲಿ ಕಳ್ಳರು ₹ 70 ಸಾವಿರ ನಗದನ್ನು ಕಳವು ಮಾಡಿದ್ದಾರೆ.</p>.<p>ಪುನೀತ್ ಅವರು ನ. 14ರಂದು ಮನೆಗೆ ಬೀಗ ಹಾಕಿಕೊಂಡು ಸಂಸಾರ ಸಮೇತರಾಗಿ ದೀಪಾವಳಿ ಹಬ್ಬಕ್ಕಾಗಿ ಊರಿಗೆ ಹೋಗಿದ್ದರು. ಬುಧವಾರ ಬೆಳಿಗ್ಗೆ ಮನೆಗೆ ಬಂದಾಗ ಡೋರ್ಲಾಕ್ ಮುರಿದಿರುವುದು ಗೊತ್ತಾಗಿದೆ. ಮನೆಯ ಬೀರುವಿನಲ್ಲಿಟ್ಟಿದ್ದ ₹ 70 ಸಾವಿರ ನಗದು ಕಳವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಇಲ್ಲಿನ ಮಾನಂದವಾಡಿ ರಸ್ತೆಯ ನೆಲ್ಲೂರು ಶೆಡ್ ಬಡಾವಣೆಯಲ್ಲಿ ಅಳವಡಿಸಿದ್ದ ಬುದ್ಧನಗರ ಎಂಬ ನಾಮಫಲಕಕ್ಕೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿರೂಪಗೊಳಿಸಿದ್ದಾರೆ.</p>.<p>ಈ ನಾಮಫಲಕದಲ್ಲಿ ಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಬಾಬುಜಗಜೀವನರಾಂ ಅವರ ಭಾವಚಿತ್ರಗಳೂ ಇದ್ದು, ಇವೂ ಹಾನಿಗೀಡಾಗಿವೆ.ಅ. 12ರಂದು ನೆಲ್ಲೂರು ಶೆಡ್ ಎಂಬ ನಾಮಫಲಕಕ್ಕೆ ಬದಲಾಗಿ ಬುದ್ಧನಗರ ಎಂಬ ನಾಮಫಲಕವನ್ನು ಅಳವಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಶೋಕಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಹೆಬ್ಬಾಳದಲ್ಲಿ ಕಳ್ಳತನ</strong></p>.<p><strong>ಮೈಸೂರು:</strong> ಇಲ್ಲಿನ ಹೆಬ್ಬಾಳದ ಲಕ್ಷ್ಮೀಕಾಂತನಗರದ ನಿವಾಸಿ ಪುನೀತ್ ಎಂಬುವವರ ಮನೆಯಲ್ಲಿ ಕಳ್ಳರು ₹ 70 ಸಾವಿರ ನಗದನ್ನು ಕಳವು ಮಾಡಿದ್ದಾರೆ.</p>.<p>ಪುನೀತ್ ಅವರು ನ. 14ರಂದು ಮನೆಗೆ ಬೀಗ ಹಾಕಿಕೊಂಡು ಸಂಸಾರ ಸಮೇತರಾಗಿ ದೀಪಾವಳಿ ಹಬ್ಬಕ್ಕಾಗಿ ಊರಿಗೆ ಹೋಗಿದ್ದರು. ಬುಧವಾರ ಬೆಳಿಗ್ಗೆ ಮನೆಗೆ ಬಂದಾಗ ಡೋರ್ಲಾಕ್ ಮುರಿದಿರುವುದು ಗೊತ್ತಾಗಿದೆ. ಮನೆಯ ಬೀರುವಿನಲ್ಲಿಟ್ಟಿದ್ದ ₹ 70 ಸಾವಿರ ನಗದು ಕಳವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>