<p><strong>ಮೈಸೂರು:</strong> ಚಾಮುಂಡಿಬೆಟ್ಟದಲ್ಲಿ ಈ ಬಾರಿ ದಸರಾ ಮಹೋತ್ಸವ ಉದ್ಘಾಟನೆ ಮಾಡಲಿರುವ ಐವರು ಕೊರೊನಾ ಯೋಧರನ್ನು ಆಯ್ಕೆ ಮಾಡುವ ವಿಚಾರ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ.</p>.<p>ಈ ವಿಚಾರದಲ್ಲೂ ಲಾಬಿ ಆರಂಭ ವಾಗಿದ್ದು, ಈಗಲೇ ಶಿಫಾರಸು ಪತ್ರಗಳು ಬರಲಾರಂಭಿಸಿವೆ. ಶಾಸಕರ ಮೇಲೆ ಒತ್ತಡ ಹೇರಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಹಿತಿಯೊಬ್ಬರನ್ನು ಆಯ್ಕೆ ಮಾಡುವಂತೆ ಒತ್ತಡಗಳು ಬರುತ್ತಿವೆ.</p>.<p>ಕೋವಿಡ್ ವಿರುದ್ಧದ ಹೋರಾಟ ದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ನರ್ಸ್ಗಳು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಹಾಗೂ ಪೊಲೀಸರಲ್ಲಿ ತಲಾ ಒಬ್ಬರನ್ನು ಆಯ್ಕೆ ಮಾಡಲಾಗುತ್ತಿದೆ.</p>.<p>ಹೀಗಾಗಿ, ಒಂದು ಸಮಿತಿ ರಚಿಸಿ ಐದು ಕ್ಷೇತ್ರಗಳ ಪ್ರಮುಖರು, ಆಯಾಯ ಇಲಾಖೆಯ ಮುಖ್ಯಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉದ್ಘಾಟಕರನ್ನು ಆಯ್ಕೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ.</p>.<p>‘ಈ ವಿಚಾರವಾಗಿ ಜಿಲ್ಲಾಧಿಕಾರಿ ಯೊಂದಿಗೂ ಚರ್ಚಿಸಿದ್ದೇನೆ. ಸಮಿತಿ ರಚಿಸುವುದಾಗಿ ಹೇಳಿದ್ದಾರೆ. ಚೆನ್ನಾಗಿ ಕೆಲಸ ಮಾಡುತ್ತಿರುವವರ ವಿವರ ಆಯಾಯ ಇಲಾಖೆಗಳ ಮುಖ್ಯಸ್ಥರಿಗೆ ಹಾಗೂ ಕೋವಿಡ್–19 ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳಿಗೆ ಗೊತ್ತಿರುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕೊರೊನಾ ವಾರಿಯರ್ಗಳ ಸೇವೆ ಅಪಾರ. ಪೊಲೀಸರು, ವೈದ್ಯರು, ಕೆಲ ಅಧಿಕಾರಿಗಳು ಕೋವಿಡ್ನಿಂದ ಮೃತರಾದರು. ಆಶಾ ಕಾರ್ಯಕರ್ತೆಯರ ಮೇಲೆ ಕೆಲವರು ಹಲ್ಲೆ ನಡೆಸಿದರು. ಜೀವದ ಹಂಗು ತೊರೆದು ಹೋರಾಟ ನಡೆಸಿದ್ದಾರೆ. ಹೀಗಾಗಿ, ಅವರ ಸೇವೆಗೆ ಗೌರವ ನೀಡುವುದು ನಮ್ಮ ಕರ್ತವ್ಯ’ ಎಂದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಶುಕ್ರವಾರ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಯುವ ಸಾಧ್ಯತೆ ಇದ್ದು, ಆಯ್ಕೆ ಸಂಬಂಧ ಇಲ್ಲಿಯೂ ಚರ್ಚೆ ಆಗಲಿದೆ.</p>.<p>ಈ ಬಾರಿ ದಸರೆಯು ಅ.17ರಿಂದ 26ರವರೆಗೆ ನಡೆಯಲಿದೆ. 17ರಂದು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಚಾಮುಂಡಿಬೆಟ್ಟದಲ್ಲಿ ಈ ಬಾರಿ ದಸರಾ ಮಹೋತ್ಸವ ಉದ್ಘಾಟನೆ ಮಾಡಲಿರುವ ಐವರು ಕೊರೊನಾ ಯೋಧರನ್ನು ಆಯ್ಕೆ ಮಾಡುವ ವಿಚಾರ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ.</p>.<p>ಈ ವಿಚಾರದಲ್ಲೂ ಲಾಬಿ ಆರಂಭ ವಾಗಿದ್ದು, ಈಗಲೇ ಶಿಫಾರಸು ಪತ್ರಗಳು ಬರಲಾರಂಭಿಸಿವೆ. ಶಾಸಕರ ಮೇಲೆ ಒತ್ತಡ ಹೇರಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಹಿತಿಯೊಬ್ಬರನ್ನು ಆಯ್ಕೆ ಮಾಡುವಂತೆ ಒತ್ತಡಗಳು ಬರುತ್ತಿವೆ.</p>.<p>ಕೋವಿಡ್ ವಿರುದ್ಧದ ಹೋರಾಟ ದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ನರ್ಸ್ಗಳು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಹಾಗೂ ಪೊಲೀಸರಲ್ಲಿ ತಲಾ ಒಬ್ಬರನ್ನು ಆಯ್ಕೆ ಮಾಡಲಾಗುತ್ತಿದೆ.</p>.<p>ಹೀಗಾಗಿ, ಒಂದು ಸಮಿತಿ ರಚಿಸಿ ಐದು ಕ್ಷೇತ್ರಗಳ ಪ್ರಮುಖರು, ಆಯಾಯ ಇಲಾಖೆಯ ಮುಖ್ಯಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉದ್ಘಾಟಕರನ್ನು ಆಯ್ಕೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ.</p>.<p>‘ಈ ವಿಚಾರವಾಗಿ ಜಿಲ್ಲಾಧಿಕಾರಿ ಯೊಂದಿಗೂ ಚರ್ಚಿಸಿದ್ದೇನೆ. ಸಮಿತಿ ರಚಿಸುವುದಾಗಿ ಹೇಳಿದ್ದಾರೆ. ಚೆನ್ನಾಗಿ ಕೆಲಸ ಮಾಡುತ್ತಿರುವವರ ವಿವರ ಆಯಾಯ ಇಲಾಖೆಗಳ ಮುಖ್ಯಸ್ಥರಿಗೆ ಹಾಗೂ ಕೋವಿಡ್–19 ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳಿಗೆ ಗೊತ್ತಿರುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕೊರೊನಾ ವಾರಿಯರ್ಗಳ ಸೇವೆ ಅಪಾರ. ಪೊಲೀಸರು, ವೈದ್ಯರು, ಕೆಲ ಅಧಿಕಾರಿಗಳು ಕೋವಿಡ್ನಿಂದ ಮೃತರಾದರು. ಆಶಾ ಕಾರ್ಯಕರ್ತೆಯರ ಮೇಲೆ ಕೆಲವರು ಹಲ್ಲೆ ನಡೆಸಿದರು. ಜೀವದ ಹಂಗು ತೊರೆದು ಹೋರಾಟ ನಡೆಸಿದ್ದಾರೆ. ಹೀಗಾಗಿ, ಅವರ ಸೇವೆಗೆ ಗೌರವ ನೀಡುವುದು ನಮ್ಮ ಕರ್ತವ್ಯ’ ಎಂದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಶುಕ್ರವಾರ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಯುವ ಸಾಧ್ಯತೆ ಇದ್ದು, ಆಯ್ಕೆ ಸಂಬಂಧ ಇಲ್ಲಿಯೂ ಚರ್ಚೆ ಆಗಲಿದೆ.</p>.<p>ಈ ಬಾರಿ ದಸರೆಯು ಅ.17ರಿಂದ 26ರವರೆಗೆ ನಡೆಯಲಿದೆ. 17ರಂದು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>