ನಿತ್ಯವೂ ಹಾರಾಟ: ‘ಎರಡು ತಿಂಗಳ ಬಳಿಕ ವಿಮಾನ ಹಾರಾಟ ಆರಂಭಗೊಂಡಿದೆ. ಉಡಾನ್ ಯೋಜನೆಯಡಿ ಮಂಡಕಳ್ಳಿ ವಿಮಾನ ನಿಲ್ದಾಣ ಬರುವುದರಿಂದ ಕಡಿಮೆ ಸಂಖ್ಯೆಯ ಪ್ರಯಾಣಿಕರಿದ್ದರೂ ವಿಮಾನಗಳು ಹಾರಾಟ ನಡೆಸಲಿವೆ. ದಿನ ಕಳೆದಂತೆ ಪ್ರಯಾಣಿಕರ ಸಂಖ್ಯೆ ಹೆಚ್ಚುವ ನಿರೀಕ್ಷೆಯಿದೆ’ ಎಂದು ಆರ್.ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.