ಮೈಸೂರು:ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನದ ಮಾತುಗಳನ್ನಾಡಿದ್ದಾರೆ.
ವರ್ಚುಯಲ್ ವೇದಿಕೆ ಮೂಲಕ ಸೋಮವಾರ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಭಾಷಣ ಮಾಡಿದ ಅವರು, ‘ಪ್ರವಾಹಪೀಡಿತ ಕುಟುಂಬಗಳಿಗೆ ನನ್ನ ಸಹಾನುಭೂತಿ ವ್ಯಕ್ತಪಡಿಸುತ್ತೇನೆ. ಎಲ್ಲಾ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರವು ರಾಜ್ಯದೊಂದಿಗೆ ಜೊತೆಗೂಡಿ ಪ್ರಯತ್ನ ನಡೆಸುತ್ತಿದೆ’ ಎಂದರು.
ಕೋವಿಡ್ ಪರಿಸ್ಥಿತಿಯಿಂದಾಗಲ ಹಲವು ನಿರ್ಬಂಧಗಳಿದ್ದರೂ ಹಬ್ಬ ಆಚರಣೆಗೆ ಜನರಲ್ಲಿ ಉತ್ಸಾಹ ಕುಂದಿಲ್ಲ ಎಂದು ಹೇಳುತ್ತಾ ನಾಡಹಬ್ಬ ದಸರೆಯ ಶುಭಾಶಯ ಕೋರಿದರು