ಮೈಸೂರು: ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ಬುಧವಾರ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ 80ಕ್ಕೂ ಅಧಿಕ ಮಂದಿ ಬಡ ಕಲಾವಿದರಿಗೆ ದಿನಸಿ ಕಿಟ್ಗಳನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ವಿತರಿಸಿದರು.
ಈ ವೇಳೆ ಮಾತನಾಡಿದ ಅವರು, ‘ಶಾಸಕ ಜಮೀರ್ ಅಹಮ್ಮದ್ಖಾನ್, ಪಾಲಿಕೆ ಸದಸ್ಯ ಸಮಿವುಲ್ಲಾ (ಅಜ್ಜು) ಮತ್ತು ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಅಭಿಮಾನಿಗಳ ಬಳಗವು ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ನೆರವಿನ ಹಸ್ತ ಚಾಚಿದ್ದಾರೆ’ ಎಂದು ಶ್ಲಾಘಿಸಿದರು.
ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನಾ, ಪಕ್ಷದ ಜಿಲ್ಲಾ (ಗ್ರಾಮಾಂತರ) ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಉಪಾಧ್ಯಕ್ಷ ಎಡತಲೆ ಮಂಜುನಾಥ್, ಪಾಲಿಕೆ ಸದಸ್ಯ ಸಮಿವುಲ್ಲಾ (ಅಜ್ಜು), ಬಳಗದ ಅಧ್ಯಕ್ಷ ಹಿನಕಲ್ ಪ್ರಕಾಶ್, ಮುಖಂಡರಾದ ಕೆ.ಮರೀಗೌಡ, ಸುನೀಲ್ ಬೋಸ್, ಎಸ್.ಆರ್.ರವಿ, ಕಿರಣ್, ಕವಿತಾ ಇದ್ದರು.