ಕೆಲ ದಿನಗಳ ಹಿಂದೆ ಕಾಡಿನಲ್ಲಿ ಮರ ಕಡಿಯುತ್ತಿದ್ದ ಗುಂಪನ್ನು ಅರಣ್ಯ ಇಲಾಖೆ ಸಿಬ್ಬಂದಿ ಚದುರಿಸಿದರು. ಈ ಗುಂಪಿನಲ್ಲಿ ಹಾಡಿ ಯುವಕ ಕುಮಾರ ಎಂಬುವರು ಇದ್ದರು ಎಂದು ವಾರಂಟ್ ಪಡೆದು ವಶಕ್ಕೆ ಪಡೆಯಲು ಬಂದಿದ್ದಾರೆ. ಆದರೆ, ಕುಮಾರ್ ಸಿಗಲಿಲ್ಲ. ವಾಪಸ್ ತೆರಳುವ ಸಂದರ್ಭದಲ್ಲಿ ಅವಿನಾಶ್ ಎಂಬ ಯುವಕನನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಈ ವೇಳೆ ತಡೆಯಲು ಮುಂದಾದ ಇವರ ಸೋದರಿ ಗರ್ಭಿಣಿ ನೀಲಾ ಹಾಗೂ ತಾಯಿ ನೀಲಮ್ಮ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.