ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯಾಧಿಕಾರಿ ಮೇಲೆ ರೈತನಿಂದ ಹಲ್ಲೆ

Last Updated 18 ಮಾರ್ಚ್ 2020, 9:36 IST
ಅಕ್ಷರ ಗಾತ್ರ

ಹುಣಸೂರು: ನಾಗರಹೊಳೆ ವನ್ಯಜೀವಿ ವಿಭಾಗದ ವೀರನಹೊಸಹಳ್ಳಿ ವಲಯದ ಅಧಿಕಾರಿ ರವಿಕುಮಾರ್ ಮೇಲೆ ರೈತರೊಬ್ಬರು ಹಲ್ಲೆ ನಡೆಸಿದ್ದಾರೆ.

ಕಾಡನಂಚಿನ ಪ್ರದೇಶದ ರೈತ ತಾವರೆನಾಯಕ ಹಲ್ಲೆ ನಡೆಸಿದವರು. ಅವರು ಹೊಲದಲ್ಲಿ ಕಸಕ್ಕೆ ಬೆಂಕಿ ಹಾಕಿದ್ದರು. ಹೊಗೆಯನ್ನು ಗಮನಿಸಿದ ಅಧಿಕಾರಿ ರವಿಕುಮಾರ್ ಸ್ಥಳಕ್ಕೆ ತೆರಳಿ, ‘ಕಾಡಿಗೆ ಹೊಂದಿಕೊಂಡಂತಿರುವ ಭೂಮಿಯಲ್ಲಿ ಬೆಂಕಿ ಹಾಕುವುದರಿಂದ ಅರಣ್ಯಕ್ಕೆ ಬೆಂಕಿ ತಗಲುವ ಸಾಧ್ಯತೆ ಇದೆ’ ಎಂದು ಹೇಳಿದ್ದಾರೆ. ಈ ವೇಳೆ ರೈತ ಹಾಗೂ ಅಧಿಕಾರಿ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ತಾವರೆನಾಯಕ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ರವಿಕುಮಾರ್‌ ಅವರನ್ನು ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT