ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ದಸರಾ ಉದ್ಘಾಟಕರಾದ ಎಸ್.ಎಂ.ಕೃಷ್ಣಗೆ ಅದ್ದೂರಿ ಸ್ವಾಗತ

Last Updated 6 ಅಕ್ಟೋಬರ್ 2021, 10:21 IST
ಅಕ್ಷರ ಗಾತ್ರ

ಮೈಸೂರು: ದಸರಾ ಉದ್ಘಾಟಕರಾದ ಎಸ್.ಎಂ.ಕೃಷ್ಣ ಅವರು ಬುಧವಾರ ಮೈಸೂರಿಗೆ ಬಂದಾಗ ಅದ್ದೂರಿ ಸ್ವಾಗತ ಲಭಿಸಿತು.

ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 3 ಕ್ಕೆ ಅವರು ಮೈಸೂರು ತಲುಪಿದರು.‌ ಮೈಸೂರಿನ ಹೊರವಲಯದ ಕೊಲಂಬಿಯಾ ಏಷ್ಯಾ ಆಸ್ಪತ್ರೆ ವೃತ್ತದ ಬಳಿ ಜಿಲ್ಲಾಡಳಿತ ಹಾಗೂ ದಸರಾ ಸ್ವಾಗತ ಸಮಿತಿ ವತಿಯಿಂದ ಅವರನ್ನು ಬರಮಾಡಿಕೊಳ್ಳಲಾಯಿತು.

ಸಚಿವರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಸಿಇಒ ಎ.ಎಂ.ಯೋಗೀಶ್, ಮೇಯರ್ ಸುನಂದಾ‌ ಫಾಲನೇತ್ರ ಇದ್ದರು.

ಕಂಸಾಳೆ, ಡೊಳ್ಳುಕುಣಿತ, ಗಾರುಡಿ ಕುಣಿತದ ಕಲಾವಿದರು ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.

ಚಾಮುಂಡಿ ಬೆಟ್ಟದಲ್ಲಿ ಗುರುವಾರ ಬೆಳಿಗ್ಗೆ 8.15 ರಿಂದ ದಸರಾ ಉದ್ಘಾಟನೆ ಸಮಾರಂಭ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT