ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ಜ. 8ರಂದು ನಡೆದ ಪ್ರತಿಭಟನೆ ವೇಳೆ ಬಿ. ನಳಿನಿ ಎಂಬುವವರು ‘ಫ್ರೀ ಕಾಶ್ಮೀರ’ ಫಲಕ ಹಿಡಿದು ವಿವಾದಕ್ಕೆ ಒಳಗಾಗಿದ್ದರು. ನಂತರ, ಅವರ ವಿರುದ್ಧ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದರು. ಈ ಮಧ್ಯೆ ನ್ಯಾಯಾಲಯದಿಂದ ನಳಿನಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಈ ವೇಳೆ, ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿಯು, ‘ದೇಶದ್ರೋಹ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ಯಾವುದೇ ವಕೀಲರು ವಕಾಲತ್ತು ವಹಿಸಬಾರದು’ ಎಂದು ನಿರ್ಣಯ ಕೈಗೊಂಡಿತ್ತು.