ಮೈಸೂರು: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಇಲ್ಲಿನ ವಿ.ವಿ.ಮೊಹಲ್ಲಾದ ನಿವಾಸಿ ಟಿ.ಎಸ್.ಜನಾರ್ದನ್ (99) ಅವರು ತಮ್ಮ ನಿವಾಸದಲ್ಲಿ ಶನಿವಾರ ನಿಧನರಾದರು. ಇವರಿಗೆ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಇವರ ದೇಹವನ್ನು ಚಾಮರಾಜನಗರ ವೈದ್ಯಕೀಯ ಕಾಲೇಜಿಗೆ ದಾನವಾಗಿ ನೀಡಲಾಯಿತು.
ಇವರು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗಿಯಾಗಿದ್ದರು. 8 ತಿಂಗಳವರೆಗೆ ಸೆರೆಮನೆವಾಸವನ್ನೂ ಅನುಭವಿಸಿದ್ದರು. ನಂತರ, ಮೈಸೂರು ಚಲೋ ಚಳವಳಿಯಲ್ಲಿಯೂ ಮುಂಚೂಣಿಯಲ್ಲಿದ್ದರು.