<p><strong>ಮೈಸೂರು:</strong> ಸರ್ಕಾರವು ಕೊರೊನಾ ಸಂಕಷ್ಟದಲ್ಲಿ ಪರದಾಡುತ್ತಿರುವ ಶಿಕ್ಷಕರಿಗೆ ಸೂಕ್ತ ಸೌಲಭ್ಯ ನೀಡದೇ ಶಿಕ್ಷೆ ನೀಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಬೇಸರ ವ್ಯಕ್ತಪಡಿಸಿದರು.</p>.<p>ಅನೇಕ ಖಾಸಗಿ ಶಾಲಾ ಶಿಕ್ಷಕರು ಕೋವಿಡ್ ಸಂದರ್ಭದಲ್ಲಿ ಸಂಬಳ ಇಲ್ಲದೇ ಪರಿತಪಿಸುತ್ತಿದ್ದಾರೆ. ಇವರ ನೆರವಿಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕು, ಖಾಸಗಿ ಶಾಲೆಗಳಿಗೆ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು. ಶಿಕ್ಷಕರನ್ನು ಜನಗಣತಿ, ಕೊರೊನಾ ಹಾಗೂ ಇನ್ನಿತರ ಕಲಸಕ್ಕೆ ನಿಯೋಜನೆ ಮಾಡಲಾಗಿದೆ. ಇವರಿಗೆ ಸೂಕ್ತ ಪ್ರತಿಫಲ ಸಿಗಬೇಕು ಎಂದು ಅವರು ಆಗ್ರಹಿಸಿದರು.</p>.<p>ಹಿಂದಿನ ಸಿದ್ದರಾಮಯ್ಯ ಸರ್ಕಾರ ಅನೇಕ ಸವಲತ್ತುಗಳನ್ನು ಶಿಕ್ಷಕರಿಗೆ ನೀಡಿತು. ಆದರೆ, ಈಗಿನ ಬಿಜೆಪಿ ಸರ್ಕಾರ ಶಿಕ್ಷಕರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಅವರು ಕಿಡಿಕಾರಿದರು.</p>.<p>ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಜನಪ್ರತಿನಿಧಿಗಳೂ ಶಿಕ್ಷಕರ ಪರವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅತಿಥಿ ಉಪನ್ಯಾಸಕರು ನಿರಂತರವಾಗಿ ಧರಣಿ ನಡೆಸುತ್ತಿದ್ದರೂ ಅವರ ಕೂಗನ್ನು ಸರ್ಕಾರ ಕೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ನ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ, ಬಿಸಿಯೂಟವನ್ನು ಮಕ್ಕಳ ಮನೆಗೆ ತಲುಪಿಸುವ ಕೆಲಸ ಆಗಬೇಕು. ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ರಾಜ್ಯದಲ್ಲಿರುವ ಖಾಸಗಿ ಮತ್ತು ಅನುದಾನಿತ ಶಾಲಾ, ಕಾಲೇಜುಗಳನ್ನೇ ಅವಲಂಬಿಸಿರುವ ಸ್ವಚ್ಛತಾ ಕಾರ್ಮಿಕರು, ವಾಹನ ಚಾಲಕರಿಗೆ ಪರಿಹಾರ ನೀಡಬೇಕು ಎಂದರು.</p>.<p>ಮುಖಂಡರಾದ ಹೆಡತಲೆ ಮಂಜುನಾಥ್, ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸರ್ಕಾರವು ಕೊರೊನಾ ಸಂಕಷ್ಟದಲ್ಲಿ ಪರದಾಡುತ್ತಿರುವ ಶಿಕ್ಷಕರಿಗೆ ಸೂಕ್ತ ಸೌಲಭ್ಯ ನೀಡದೇ ಶಿಕ್ಷೆ ನೀಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಬೇಸರ ವ್ಯಕ್ತಪಡಿಸಿದರು.</p>.<p>ಅನೇಕ ಖಾಸಗಿ ಶಾಲಾ ಶಿಕ್ಷಕರು ಕೋವಿಡ್ ಸಂದರ್ಭದಲ್ಲಿ ಸಂಬಳ ಇಲ್ಲದೇ ಪರಿತಪಿಸುತ್ತಿದ್ದಾರೆ. ಇವರ ನೆರವಿಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕು, ಖಾಸಗಿ ಶಾಲೆಗಳಿಗೆ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು. ಶಿಕ್ಷಕರನ್ನು ಜನಗಣತಿ, ಕೊರೊನಾ ಹಾಗೂ ಇನ್ನಿತರ ಕಲಸಕ್ಕೆ ನಿಯೋಜನೆ ಮಾಡಲಾಗಿದೆ. ಇವರಿಗೆ ಸೂಕ್ತ ಪ್ರತಿಫಲ ಸಿಗಬೇಕು ಎಂದು ಅವರು ಆಗ್ರಹಿಸಿದರು.</p>.<p>ಹಿಂದಿನ ಸಿದ್ದರಾಮಯ್ಯ ಸರ್ಕಾರ ಅನೇಕ ಸವಲತ್ತುಗಳನ್ನು ಶಿಕ್ಷಕರಿಗೆ ನೀಡಿತು. ಆದರೆ, ಈಗಿನ ಬಿಜೆಪಿ ಸರ್ಕಾರ ಶಿಕ್ಷಕರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಅವರು ಕಿಡಿಕಾರಿದರು.</p>.<p>ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಜನಪ್ರತಿನಿಧಿಗಳೂ ಶಿಕ್ಷಕರ ಪರವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅತಿಥಿ ಉಪನ್ಯಾಸಕರು ನಿರಂತರವಾಗಿ ಧರಣಿ ನಡೆಸುತ್ತಿದ್ದರೂ ಅವರ ಕೂಗನ್ನು ಸರ್ಕಾರ ಕೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ನ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ, ಬಿಸಿಯೂಟವನ್ನು ಮಕ್ಕಳ ಮನೆಗೆ ತಲುಪಿಸುವ ಕೆಲಸ ಆಗಬೇಕು. ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ರಾಜ್ಯದಲ್ಲಿರುವ ಖಾಸಗಿ ಮತ್ತು ಅನುದಾನಿತ ಶಾಲಾ, ಕಾಲೇಜುಗಳನ್ನೇ ಅವಲಂಬಿಸಿರುವ ಸ್ವಚ್ಛತಾ ಕಾರ್ಮಿಕರು, ವಾಹನ ಚಾಲಕರಿಗೆ ಪರಿಹಾರ ನೀಡಬೇಕು ಎಂದರು.</p>.<p>ಮುಖಂಡರಾದ ಹೆಡತಲೆ ಮಂಜುನಾಥ್, ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>