<p><strong>ವರುಣಾ: </strong>ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ಶಿಥಿಲಾವಸ್ಥೆ ಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ಹಿರಿಯ ವಿದ್ಯಾರ್ಥಿಗಳು ದುರಸ್ತಿಗೊಳಿಸಲು ಮುಂದಾಗಿದ್ದಾರೆ.</p>.<p>ಹಿರಿಯ ವಿದ್ಯಾರ್ಥಿಗಳು ‘ನಮ್ಮ ಶಾಲೆ ನಮ್ಮ ಹೆಮ್ಮೆ’ ಎಂಬ ವಾಟ್ಸ್ಆ್ಯಪ್ ಗ್ರೂಪ್ ರಚಿಸಿಕೊಂಡು ಶಾಲೆಯ ಸಮಸ್ಯೆಗಳನ್ನು ಪರಸ್ಪರ ಚರ್ಚಿಸಿ, ಗ್ರಾಮದ ಎಲ್ಲಾ ಮುಖಂಡರು, ಸಂಘ ಸಂಸ್ಥೆ, ಶಾಲೆಯ ಶಿಕ್ಷಕರ ಮತ್ತು ದಾನಿಗಳ ಸಹಯೋಗದಲ್ಲಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಪಣತೊಟ್ಟಿದ್ದಾರೆ.</p>.<p>ಶಾಲಾ ಕಟ್ಟಡ ಚಾವಣಿ ದುರಸ್ತಿ, ಕಾಂಪೌಂಡ್ಗೆ ನೂತನ ಗೇಟ್ ಅಳವಡಿಕೆ, ಧ್ವಜ ಸ್ಥಂಭ ನಿರ್ಮಾಣ, ಉದ್ಯಾನಕ್ಕೆ ಅಲಂಕಾರಿಕ ಕೆಲಸಗಳು, ಉದ್ಯಾನ ನಿರ್ಮಾಣಕ್ಕೆ ಸಿದ್ಧತೆ, ಆಟದ ಮೈದಾನ ಅಭಿವೃದ್ಧಿ, ಶಾಲೆಗೆ<br />ವಿನೂತನ ಮಾದರಿಯಲ್ಲಿ ಬಣ್ಣ ಹಾಕುವುದು ಹಾಗೂ ಶಾಲೆಯ ಮುಂಭಾಗದ ಸ್ವಚ್ಛತೆ ಸೇರಿದಂತೆ ಹಲವಾರು ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದಾರೆ.</p>.<p>‘ಶಾಲೆಯ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು, ಕಾಮಗಾರಿ ಚುರುಕುಗೊಳ್ಳಲು ದಾನಿಗಳಿಂದ ನೆರವು ನಿರೀಕ್ಷಿಸುತ್ತಿದ್ದೇವೆ’ ಎಂದು ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವರುಣಾ: </strong>ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ಶಿಥಿಲಾವಸ್ಥೆ ಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ಹಿರಿಯ ವಿದ್ಯಾರ್ಥಿಗಳು ದುರಸ್ತಿಗೊಳಿಸಲು ಮುಂದಾಗಿದ್ದಾರೆ.</p>.<p>ಹಿರಿಯ ವಿದ್ಯಾರ್ಥಿಗಳು ‘ನಮ್ಮ ಶಾಲೆ ನಮ್ಮ ಹೆಮ್ಮೆ’ ಎಂಬ ವಾಟ್ಸ್ಆ್ಯಪ್ ಗ್ರೂಪ್ ರಚಿಸಿಕೊಂಡು ಶಾಲೆಯ ಸಮಸ್ಯೆಗಳನ್ನು ಪರಸ್ಪರ ಚರ್ಚಿಸಿ, ಗ್ರಾಮದ ಎಲ್ಲಾ ಮುಖಂಡರು, ಸಂಘ ಸಂಸ್ಥೆ, ಶಾಲೆಯ ಶಿಕ್ಷಕರ ಮತ್ತು ದಾನಿಗಳ ಸಹಯೋಗದಲ್ಲಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಪಣತೊಟ್ಟಿದ್ದಾರೆ.</p>.<p>ಶಾಲಾ ಕಟ್ಟಡ ಚಾವಣಿ ದುರಸ್ತಿ, ಕಾಂಪೌಂಡ್ಗೆ ನೂತನ ಗೇಟ್ ಅಳವಡಿಕೆ, ಧ್ವಜ ಸ್ಥಂಭ ನಿರ್ಮಾಣ, ಉದ್ಯಾನಕ್ಕೆ ಅಲಂಕಾರಿಕ ಕೆಲಸಗಳು, ಉದ್ಯಾನ ನಿರ್ಮಾಣಕ್ಕೆ ಸಿದ್ಧತೆ, ಆಟದ ಮೈದಾನ ಅಭಿವೃದ್ಧಿ, ಶಾಲೆಗೆ<br />ವಿನೂತನ ಮಾದರಿಯಲ್ಲಿ ಬಣ್ಣ ಹಾಕುವುದು ಹಾಗೂ ಶಾಲೆಯ ಮುಂಭಾಗದ ಸ್ವಚ್ಛತೆ ಸೇರಿದಂತೆ ಹಲವಾರು ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದಾರೆ.</p>.<p>‘ಶಾಲೆಯ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು, ಕಾಮಗಾರಿ ಚುರುಕುಗೊಳ್ಳಲು ದಾನಿಗಳಿಂದ ನೆರವು ನಿರೀಕ್ಷಿಸುತ್ತಿದ್ದೇವೆ’ ಎಂದು ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>