ಸಭೆಯಲ್ಲಿ 140 ಮಂದಿ ಕುಂದುಕೊರತೆಗಳ ಬಗ್ಗೆ ಅರ್ಜಿ ಸಲ್ಲಿಸಿದ್ದಾರೆ. ಖಾತೆ, ಹದ್ದುಬಸ್ತು, ಸರ್ವೆ ಬಾಕಿ, ವೃದ್ಧಾಪ್ಯ ವೇತನ ಮುಂತಾದ ಬಾಕಿ ಉಳಿದಿರುವ ಪ್ರಕರಣಗಳನ್ನು 15 ದಿನಗಳಲ್ಲಿ ಇತ್ಯರ್ಥಪಡಿಸಲಾಗುವುದು. ವಸತಿ ಯೋಜನೆಗಳ ಮನೆ ನಿರ್ಮಾಣ, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ, ಕ್ರಮವಹಿಸಲು ಕಾಲಾವಕಾಶ ಬೇಕಾಗುತ್ತದೆ. ಅರ್ಜಿ ಸಲ್ಲಿಸಿದವರಿಗೆ ಕೈಗೊಂಡ ಕ್ರಮಗಳ ಬಗ್ಗೆ ಮೊಬೈಲ್ಗೆ ಮೆಸೇಜ್ ಮೂಲಕ ತಿಳಿಸಲಾಗುವುದು ಎಂದು ತಿಳಿಸಿದರು.