‘2018ರಲ್ಲಿ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡಿದ್ದೇ ಜೆಡಿಎಸ್ ನೆಲಕಚ್ಚಲು ಕಾರಣ. ಇದರಿಂದಲೇ ಕೆ.ಆರ್.ಪೇಟೆ, ಶಿರಾ, ಹುಣಸೂರು, ಯಶವಂತಪುರ ಕ್ಷೇತ್ರಗಳಲ್ಲಿ ಜೆಡಿಎಸ್ ಸೋಲಲು ಕಾರಣವಾಯಿತು. ಸಿಂದಗಿ, ಹಾನಗಲ್ ಉಪಚುನಾವಣೆಯನ್ನು ನಾನು ಲೆಕ್ಕಕ್ಕೆ ಇಟ್ಟಿಲ್ಲ. ಮುಂದಿನ 2023ರ ವೇಳೆಗೆ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದೇ ಮುಖ್ಯ ಗುರಿ. 226 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಸೂಚಿಸಿದ್ದು, ಸಂಘಟನೆಯ ಕೆಲಸವನ್ನು ಆರಂಭಿಸಲಾಗಿದೆ. ಹೊಸ ರೀತಿಯಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ’ ಎಂದರು.