ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಟಿಡಿಗೆ ಮಂಜುನಾಥ್ ಕೃತಜ್ಞತೆ

Last Updated 12 ಡಿಸೆಂಬರ್ 2019, 10:08 IST
ಅಕ್ಷರ ಗಾತ್ರ

ಮೈಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ಎಚ್‌.ಪಿ.ಮಂಜುನಾಥ್‌ ಅವರು ಬುಧವಾರ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡರ ನಿವಾಸಕ್ಕೆ ತೆರಳಿ ಕೃತಜ್ಞತೆ ಸಲ್ಲಿಸಿದರು.

‘ಕಾಂಗ್ರೆಸ್‌ ಗೆಲುವಿನ ಬಗ್ಗೆ ಉಪಚುನಾವಣೆ ಘೋಷಣೆಗೆ ಮುನ್ನವೇ ಜಿ.ಟಿ.ದೇವೇಗೌಡರು ಭವಿಷ್ಯ ನುಡಿದಿದ್ದು ನೆರವಾಯಿತು. ಹೀಗಾಗಿ, ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ’ ಎಂದು ನೂತನ ಶಾಸಕ ಮಂಜುನಾಥ್ ಹೇಳಿದರು.

‘ಜಿ.ಟಿ.ದೇವೇಗೌಡರ ಪತ್ನಿ ಲಲಿತಾ, ಅವರ ಪುತ್ರ ಹರೀಶ್ ಗೌಡ ತಮ್ಮ ಚುನಾವಣೆ ಎಂಬಂತೆ ನನ್ನ ಬೆನ್ನಿಗೆ ನಿಂತು ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು’ ಎಂದು ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT