ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗನಿಗೆ ಕ್ಷೇತ್ರ ನಿಗದಿಯಾದ ಬಳಿಕ ಕಾಂಗ್ರೆಸ್‌ ಸೇರುವ ಕುರಿತು ತೀರ್ಮಾನ: ಜಿಟಿಡಿ

Last Updated 12 ಮಾರ್ಚ್ 2022, 9:45 IST
ಅಕ್ಷರ ಗಾತ್ರ

ಮೈಸೂರು: ‘ಪುತ್ರ ಹರೀಶ್‌ ಗೌಡ ಸ್ಪರ್ಧೆಗೆ ಕ್ಷೇತ್ರ ಇತ್ಯರ್ಥವಾದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರಿಗೂ ಹೇಳಿದ್ದೇನೆ’ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶನಿವಾರ ಇಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಹುಣಸೂರು ಕ್ಷೇತ್ರಕ್ಕೆ ನಮ್ಮ ಮೊದಲ ಆದ್ಯತೆ, ಕೆ.ಆರ್‌.ನಗರ ಎರಡನೇ ಹಾಗೂ ಚಾಮರಾಜ ಕ್ಷೇತ್ರ ಮೂರನೇ ಆದ್ಯತೆ ಎಂಬುದಾಗಿ ಕಾಂಗ್ರೆಸ್‌ ಮುಖಂಡರಿಗೆ ಹೇಳಿದ್ದೇನೆ. ಯಾವುದನ್ನಾದರೂ ಕೊಡಬಹುದು ಎಂಬುದನ್ನು ಸ್ಪಷ್ಟಪಡಿಸಿದ್ದೇನೆ. ಹೈಕಮಾಂಡ್‌ ಜೊತೆಗೆ ಮಾತನಾಡಿ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ’ ಎಂದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಮುಖಂಡರು ಕೂಡ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಪಕ್ಷಕ್ಕೆ ಬರುವಂತೆ ಕರೆಯುತ್ತಿದ್ದು, ಎರಡು ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದಾರೆ. ನಾನು ಯಾವುದೇ ತೀರ್ಮಾನ ಕೈಗೊಂಡಿಲ್ಲ, ಸದ್ಯಕ್ಕೆ ಜೆಡಿಎಸ್‌ನಲ್ಲೇ ಇದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT