ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಚೇನಹಳ್ಳಿ ಕೆರೆ ಹಬ್ಬ ಇಂದು

Last Updated 3 ಮಾರ್ಚ್ 2018, 20:02 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ರಾಚೇನಹಳ್ಳಿ-ದಾಸರಹಳ್ಳಿ ಕೆರೆಅಂಗಳದಲ್ಲಿ ಇದೇ 4ರಂದು ‘ನಮ್ಮ ಬೆಂಗಳೂರು ಹಬ್ಬ’ ಹಾಗೂ ಕೆರೆಯ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 6 ಗಂಟೆಗೆ ಸಾರ್ವಜನಿಕರಿಂದ ಕೆರೆಯ ಸುತ್ತ 5 ಕಿ.ಮೀ. ಓಟ, ಸೈಕ್ಲೋಥಾನ್, ಆಹಾರ ಮಳಿಗೆಗಳು, ಕಲಾಪ್ರದರ್ಶನ, ಗ್ರಾಮೀಣ ಆಟಗಳು, ಲೇಸರ್ ಶೋ, ಜಲಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕ್ಷೇತ್ರ ವ್ಯಾಪ್ತಿಯ ಎಲ್ಲ ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದ್ದು, ರಾಚೇನಹಳ್ಳಿ-ದಾಸರಹಳ್ಳಿ ಕೆರೆಯನ್ನು ₹16 ಕೋಟಿ ವೆಚ್ಚದಲ್ಲಿ
ಅಭಿವೃದ್ಧಿಗೊಳಿಸಲಾಗಿದೆ. ಕೆರೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT