ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌.ಡಿ.ಕೋಟೆಯಲ್ಲಿ ಕನ್ನಡ ಕಲರವ

4ನೇ ತಾಲ್ಲೂಕು ಸಮ್ಮೇಳನಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣ ಸಜ್ಜು
Last Updated 7 ಡಿಸೆಂಬರ್ 2018, 17:13 IST
ಅಕ್ಷರ ಗಾತ್ರ

ಎ‌ಚ್.ಡಿ.ಕೋಟೆ: ತಾಲ್ಲೂಕಿನ 4ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣ ಸಿದ್ಧಗೊಂಡಿದ್ದು, ಜಯಚಾಮರಾಜೇಂದ್ರ ಸಭಾಂಗಣ ಎಂದು ನಾಮಕರಣ ಮಾಡಲಾಗಿದೆ. ವೇದಿಕೆಗೆ ದಿ.ಎಚ್.ಬಿ.ಲಿಂಗಣ್ಣಯ್ಯ ವೇದಿಕೆ ಎಂದು ನಾಮಕರಣ ಮಾಡಲಾಗಿದೆ.

ಡಿ. 7 ರಂದು ಬೆಳಿಗ್ಗೆ 8.00 ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, ಶಾಸಕ ಸಿ.ಅನಿಲ್ ಕುಮಾರ್ ರಾಷ್ಟ್ರ ಧ್ವಜಾರೋಹಣ ನಡೆಸಲಿದ್ದಾರೆ. ತಹಶೀಲ್ದಾರ್ ಎಂ.ಮಂಜುನಾಥ್ ನಾಡ ಧ್ವಜಾರೋಹಣ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಕನ್ನಡ ಪ್ರಮೋದ್ ಪರಿಷತ್‌ನ ಧ್ವಜಾರೋಹಣ ಮಾಡಲಿದ್ದಾರೆ.

8.30ಕ್ಕೆ ಪೂರ್ಣಕುಂಭ ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆ ಯಲ್ಲಿ ವೇದಿಕೆಗೆ ಕರೆದುಕೊಂಡ ಹೋಗಲಾಗುವುದು. ವರದರಾಜಸ್ವಾಮಿ ದೇವಸ್ಥಾನದ ಮುಂಭಾಗದಿಂದ ಆರಂಭವಾಗುವ ಮೆರವಣಿಗೆಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ದೇವಣ್ಣ ಚಾಲನೆ ನೀಡಲಿದ್ದಾರೆ.

ಉಪಾಧ್ಯಕ್ಷೆ ಮಂಜುಳಾ ಚಂದ್ರೇಗೌಡ, ಸರಗೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ರವಿಕುಮಾರ್, ಸರಗೂರು ತಾಲ್ಲೂಕಿನ ತಹಶೀಲ್ದಾರ್ ಪ್ರಸನ್ನಮೂರ್ತಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ.ದರ್ಶನ್, ಎಚ್.ಡಿ.ಕೋಟೆ ಪುರಸಭೆ ಮುಖ್ಯಾಧಿಕಾರಿ ಡಿ.ಆರ್.ವಿಜಯಕುಮಾರ್ ಪಾಲ್ಗೊಳ್ಳುವರು.

11 ಗಂಟೆಗೆ ಸಚಿವ ಸಾ.ರಾ. ಮಹೇಶ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಂಸದ ಆರ್. ಧ್ರುವನಾರಾಯಣ್ ಸಾಂಸೃತಿಕ ಕಾರ್ಯಕ್ರಮವನ್ನು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಹೀಮಾಸುಲ್ತಾನ್ ಪುಸ್ತಕ ಮಳಿಗೆ ಉದ್ಘಾಟಿಸುವರು. ಸಾಹಿತಿ ಕ್ಷೀರಸಾಗರ್ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡುವುರು.

ಹಿರಿಯ ವಿದ್ವಾಂಸ ಮಲೆಯೂರು ಗುರುಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನಾ, ವೈ.ಡಿ.ರಾಜಣ್ಣ ಇತರರು ಉಪಸ್ಥಿತರಿರುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT