ಹುಣಸೂರು ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಆರೋಗ್ಯ ಸಚಿವ ರಮೇಶ್ ಕುಮಾರ್ ಮಂಜೂರಾತಿ ನೀಡಿ, ಮೊದಲ ಕಂತಿನಲ್ಲಿ ₹25 ಕೋಟಿ ಅನುದಾನ ನೀಡಿದ್ದರು. ಇದಕ್ಕಾಗಿ ತೋಟಗಾರಿಕೆ ಇಲಾಖೆಗೆ ಸೇರಿದ 4 ಎಕರೆ ನಿವೇಶನ ಮಂಜೂರಾಗಿತ್ತು. ಇದರ ಬದಲಿಯಾಗಿ ಧರ್ಮಾಪುರ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆಗೆ 100 ಎಕರೆ ಭೂಮಿ ನೀಡಲಾಗಿತ್ತು ಎಂದರು.