<p><strong>ಮೈಸೂರು:</strong> ‘ಪ್ರತಿ ದಿನ ಒಂದೊಂದು ಹಗರಣ ಹೊರಬರುತ್ತಿದ್ದು, ಕೆಟ್ಟ ಹೆಸರು ಪಡೆದಿರುವ ಈ ರಾಜ್ಯ ಸರ್ಕಾರವನ್ನು ಬಿಜೆಪಿ ಕಾರ್ಯಕರ್ತರೇ ಮೆಚ್ಚುವುದಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.</p>.<p>ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಕಿಂಗ್ಪಿನ್ಗಳ ಜೊತೆಗೆ ಪೊಲೀಸ್ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗಿಯಾಗಿರುವ ಶಂಕೆ ಇದೆ. ಹೀಗಾಗಿ, ಪ್ರಾಮಾಣಿಕ ಹಾಗೂ<br />ಪಾರದರ್ಶಕವಾಗಿ ತನಿಖೆ ನಡೆಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಿದೆ. ಪರೀಕ್ಷೆಯ ಪಾವಿತ್ರ್ಯವೇ ಹಾಳಾಗುತ್ತಿದೆ. ಚೆನ್ನಾಗಿ ಓದಿಕೊಂಡವರು<br />ಯಾವಾಗ ಪರೀಕ್ಷೆ ಎದುರಿಸಿದರೂ ಉತ್ತೀರ್ಣರಾಗುತ್ತಾರೆ. ಓದದೇ ಇರುವವರಿಗಷ್ಟೇ ಆತಂಕ’ ಎಂದು ಅವರು ಹೇಳಿದರು.</p>.<p>‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ನಡೆದಿರುವ ವಿಚಾರಗಳನ್ನು<br />ಮನವರಿಕೆ ಮಾಡುವುದನ್ನು ಬಿಟ್ಟು ಬೇರೆಯವರ ಮೇಲೆ ಆರೋಪ ಮಾಡುತ್ತಾರೆ. ಕೆಲಸಕ್ಕೆ ಬಾರದ ಮಾತನಾಡಿ ಜನರಲ್ಲಿ ಗೊಂದಲ ಮೂಡಿಸುತ್ತಿರುವ ಶ್ರೀರಾಮಸೇನೆ, ಆರ್ಎಸ್ಎಸ್, ಬಜರಂಗದಳದ ಮುಖಂಡರ ವಿರುದ್ಧ ಮುಖ್ಯಮಂತ್ರಿ ತಮ್ಮ ಅಸ್ತ್ರ ಬಳಸಲಿ’ ಎಂದು ವಿಶ್ವನಾಥ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಪ್ರತಿ ದಿನ ಒಂದೊಂದು ಹಗರಣ ಹೊರಬರುತ್ತಿದ್ದು, ಕೆಟ್ಟ ಹೆಸರು ಪಡೆದಿರುವ ಈ ರಾಜ್ಯ ಸರ್ಕಾರವನ್ನು ಬಿಜೆಪಿ ಕಾರ್ಯಕರ್ತರೇ ಮೆಚ್ಚುವುದಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.</p>.<p>ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಕಿಂಗ್ಪಿನ್ಗಳ ಜೊತೆಗೆ ಪೊಲೀಸ್ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗಿಯಾಗಿರುವ ಶಂಕೆ ಇದೆ. ಹೀಗಾಗಿ, ಪ್ರಾಮಾಣಿಕ ಹಾಗೂ<br />ಪಾರದರ್ಶಕವಾಗಿ ತನಿಖೆ ನಡೆಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಿದೆ. ಪರೀಕ್ಷೆಯ ಪಾವಿತ್ರ್ಯವೇ ಹಾಳಾಗುತ್ತಿದೆ. ಚೆನ್ನಾಗಿ ಓದಿಕೊಂಡವರು<br />ಯಾವಾಗ ಪರೀಕ್ಷೆ ಎದುರಿಸಿದರೂ ಉತ್ತೀರ್ಣರಾಗುತ್ತಾರೆ. ಓದದೇ ಇರುವವರಿಗಷ್ಟೇ ಆತಂಕ’ ಎಂದು ಅವರು ಹೇಳಿದರು.</p>.<p>‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ನಡೆದಿರುವ ವಿಚಾರಗಳನ್ನು<br />ಮನವರಿಕೆ ಮಾಡುವುದನ್ನು ಬಿಟ್ಟು ಬೇರೆಯವರ ಮೇಲೆ ಆರೋಪ ಮಾಡುತ್ತಾರೆ. ಕೆಲಸಕ್ಕೆ ಬಾರದ ಮಾತನಾಡಿ ಜನರಲ್ಲಿ ಗೊಂದಲ ಮೂಡಿಸುತ್ತಿರುವ ಶ್ರೀರಾಮಸೇನೆ, ಆರ್ಎಸ್ಎಸ್, ಬಜರಂಗದಳದ ಮುಖಂಡರ ವಿರುದ್ಧ ಮುಖ್ಯಮಂತ್ರಿ ತಮ್ಮ ಅಸ್ತ್ರ ಬಳಸಲಿ’ ಎಂದು ವಿಶ್ವನಾಥ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>