‘ಬದಲಾವಣೆಗಾಗಿ 17 ಮಂದಿ ಬೆಂಬಲ ನೀಡಿದ್ದರು.ಆದರೆ, ಅಧಿಕಾರ ಸಿಕ್ಕ ಮೇಲೆ ಬದಲಾದರು. ಇವರಿಗೆಲ್ಲಾ ಮುಖ್ಯಮಂತ್ರಿ ಆಗಿದ್ದವರು ಯಡಿಯೂರಪ್ಪ ಅಲ್ಲ. ಬದಲಾಗಿ ಅವರ ಪುತ್ರ ವಿಜಯೇಂದ್ರ. ಇವರ ಸಾಧನೆ ಶೂನ್ಯ. ಹೀಗಾಗಿ, ಈ 17 ಜನಕ್ಕೆ ಅಧಿಕಾರ ನೀಡದಿದ್ದರೂ ಪರವಾಗಿಲ್ಲ. ಅವರು ಎಲ್ಲಿಗೂ ಹೋಗುವುದಿಲ್ಲ. ಹೋದರೆ ಹೋಗಲಿ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯಲಿ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.