ಮೈಸೂರು: ‘ಮೈಸೂರಿನಲ್ಲಿ ಕೊರೊನಾ ಮಹಾಮಾರಿಯ ನರ್ತನ ಹೆಚ್ಚಳಗೊಂಡಿದೆ. ಕೆಲವು ಅಧಿಕಾರಿಗಳು ಇದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತಿದ್ದಾರೆ. ಇಂತಹ ಅಸಮರ್ಥರನ್ನು ವಾಪಸ್ ಕರೆಸಿಕೊಂಡು, ಸಮರ್ಥರನ್ನು ನಿಯೋಜಿಸಿ’ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎಚ್.ವಿಶ್ವನಾಥ್ ವಿಡಿಯೊ ಕ್ಲಿಪ್ಪಿಂಗ್ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.