ಇದಕ್ಕೂ ಮುನ್ನ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, ‘ಈಗ ಯಾರು ಉಪಚುನಾವಣೆಯಲ್ಲಿ ಸೋತಿದ್ದಾರೋ ಅವರಿಗೆ ಯಡಿಯೂರಪ್ಪಚುನಾವಣೆಗೆ ಸ್ಪರ್ಧಿಸುವುದು ಬೇಡ. ಸೋತರೆ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಹೇಳಿದ್ದರು. ಜತೆಗೆ, ಮೇ ತಿಂಗಳಿನಲ್ಲಿ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡುವುದಾಗಿಯೂ ಭರವಸೆ ನೀಡಿದ್ದರು. ಅವರ ಮಾತಿನಂತೆ ಶಂಕರ್ ನಡೆದುಕೊಂಡರು. ಉಳಿದವರು ಸ್ಪರ್ಧಿಸಿ ಸೋತರು. ಈಗ ಸಚಿವ ಸ್ಥಾನ ನೀಡುವುದು ಬಿಡುವುದು ಮುಖ್ಯಮಂತ್ರಿ ಅವರಿಗೆ ಸೇರಿದ ವಿಚಾರ’ ಎಂದು ಸುದ್ದಿಗಾರರಿಗೆ ತಿಳಿಸಿದರು.