ಬಿಜೆಪಿ ಕಾರ್ಯಕರ್ತನಿಗೆ ಬೆದರಿಕೆ: ಜಾಲಹಳ್ಳಿಯಲ್ಲಿ ಗುರುತಿನ ಚೀಟಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದನ್ನು ಪತ್ತೆ ಹಚ್ಚಿ ಚುನಾವಣೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದ ಬಿಜೆಪಿ ಕಾರ್ಯಕರ್ತ ರಾಕೇಶ್ ಅವರಿಗೆ ಕೆಲವರು ಜೀವ ಬೆದರಿಕೆವೊಡ್ಡಿದ್ದಾರೆ. ಈ ಬಗ್ಗೆ ಅವರು, ಜಾಲಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ‘ಭಾರಿ ಚುನಾವಣಾ ಅಕ್ರಮದ ಬಗ್ಗೆ ಮಾಹಿತಿ ಕೊಟ್ಟಿದ್ದೇನೆ. ಹೀಗಾಗಿ ಹಲವರು ಬೆದರಿಕೆವೊಡ್ಡುತ್ತಿದ್ದಾರೆ’ ಎಂದು ರಾಕೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.