ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ಸಿದ್ದರಾಮಯ್ಯ ಕಾಡು ಮನುಷ್ಯ ಎಂದಿರುವುದಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್, ‘ಕಾಡನ್ನು ಕಾಪಾಡುವವರಿಗೆ, ಕನ್ನಡ ಭಾಷೆಗೆ, ಜನತಂತ್ರ ವ್ಯವಸ್ಥೆಗೆ ಅಪಮಾನ ಮಾಡುತ್ತಿದ್ದೀರಿ. ನಿಮಗೆ ಏಕವಚನ, ಬಹುವಚನ ಗೊತ್ತಿಲ್ವಾ? ಪ್ರಬುದ್ಧತೆಯ ಪ್ರದರ್ಶನಕ್ಕಾಗಿ ಸಂಧಿ ಪಾಠ ಮಾಡುತ್ತಿದ್ದವರು ನೀವು. ಆದರೆ ಇದೀಗ ನಿಮ್ಮ ಮಾತು, ವರ್ತನೆ ಪ್ರಬುದ್ಧವಾಗಿಲ್ಲ. ವಿವೇಚನೆ ಕಳೆದುಕೊಂಡು ಮಾತನಾಡುತ್ತಿದ್ದೀರಿ. ನಿಮ್ಮನ್ನು ಕನ್ನಡಿಗರು ಕ್ಷಮಿಸಲ್ಲ’ ಎಂದು ಹರಿಹಾಯ್ದರು.