<p><strong>ಮೈಸೂರು:</strong> ‘ಭಾರತದ ಪ್ರಾದೇಶಿಕ ಪತ್ರಿಕೋದ್ಯಮಕ್ಕೆ ಸಂಬಂಧಿಸಿದಂತೆ ಅನನ್ಯವಾದ ಸ್ಥಳ ಮೈಸೂರು. ಇಲ್ಲಿ ಗಟ್ಟಿಯಾಗಿ ನೆಲೆಯೂರಿದ ಪ್ರಾದೇಶಿಕ ಪತ್ರಿಕೆಗಳೇ ಇದಕ್ಕೆ ಕಾರಣ. ಇಂತಹ ಪತ್ರಿಕೆಗಳನ್ನು ಕಟ್ಟುವಲ್ಲಿ ಪತ್ರಕರ್ತ ಹರೀಶ್ ಬಂದಗದ್ದೆ ಪಾತ್ರ ಪ್ರಮುಖವಾದದು’ ಎಂದು ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್ ಬಣ್ಣಿಸಿದರು.</p>.<p>ಹರೀಶ್ ಅವರು ಪತ್ರಿಕಾ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಆಯೋಜಿಸಿದ್ದ ‘ಹರೀಶ 60ರ ಹರುಷ’ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.</p>.<p>‘ಪತ್ರಿಕೋದ್ಯಮದಲ್ಲಿ ಹರೀಶ್ ಅಜ್ಞಾತ ಹೀರೊ. ಅವರು ಎಲೆಮರೆಯ ಕಾಯಿಯಂತೆ ಕೆಲಸ ಮಾಡಿದವರು. ತಮ್ಮ ವೃತ್ತಿ ಅನುಭವಗಳ ಕುರಿತು ಪುಸ್ತಕ ಬರೆಯ ಬೇಕು’ ಎಂದರು.</p>.<p>ವಾಗ್ಮಿ ಪ್ರೊ.ಕೃಷ್ಣೇಗೌಡ ಮಾತನಾಡಿ, ‘ಇಂದು ಎಲ್ಲ ರಂಗದಲ್ಲೂ ಲಾಭ– ನಷ್ಟವೇ ಪ್ರಧಾನವಾಗಿದೆ. ಸೂಕ್ಷ್ಮ ಸಂವೇದನೆ ಹೊಂದಿರುವ ವ್ಯಕ್ತಿ ನಿವೃತ್ತಿಯಾಗುವ ಮೂಲಕ ಇವುಗಳಿಂದ ಸ್ವಾತಂತ್ರ್ಯ ಪಡೆಯಲು ಇಚ್ಛಿಸುತ್ತಾನೆ. ಹೀಗಾಗಿ, ನಿವೃತ್ತಿ ಬದುಕು ಸುಂದರ ಅನುಭವ ನೀಡುತ್ತದೆ’ ಎಂದರು.</p>.<p>ಸನ್ಮಾನ ಸ್ವೀಕರಿಸಿದ ಹರೀಶ್, ‘1977ರಲ್ಲಿ ಮೈಸೂರಿಗೆ ಬಂದೆ. 42 ವರ್ಷ ಪತ್ರಿಕಾ ವೃತ್ತಿ ಮಾಡಿದ್ದು ತೃಪ್ತಿ ತಂದಿದೆ. ಬದಲಾಗಿರುವ ಪತ್ರಿಕಾರಂಗದ ವಾತಾವರಣಕ್ಕೆ ಹೊಂದಿಕೊಳ್ಳುವುದು ಕಷ್ಟಕರ. ಹೀಗಾಗಿ, ನಿವೃತ್ತಿ ಪಡೆಯಲು ಹಂಬಲಿಸಿದೆ’ ಎಂದು ಹೇಳಿದರು.</p>.<p>ಶಾಸಕ ಜಿ.ಟಿ.ದೇವೇಗೌಡ, ಮುಖಂಡ ಎಚ್.ವಿಶ್ವನಾಥ್, ವಾಸು, ಪತ್ರಕರ್ತರಾದ ಅಂಶಿ ಪ್ರಸನ್ನಕುಮಾರ್, ಸಿ.ಕೆ.ಮಹೇಂದ್ರ, ಈಚನೂರು ಕುಮಾರ್ ಇತರರು ಹರೀಶ್ ಅವರ ಒಡನಾಟವನ್ನು ಸ್ಮರಿಸಿ, ಶುಭ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಭಾರತದ ಪ್ರಾದೇಶಿಕ ಪತ್ರಿಕೋದ್ಯಮಕ್ಕೆ ಸಂಬಂಧಿಸಿದಂತೆ ಅನನ್ಯವಾದ ಸ್ಥಳ ಮೈಸೂರು. ಇಲ್ಲಿ ಗಟ್ಟಿಯಾಗಿ ನೆಲೆಯೂರಿದ ಪ್ರಾದೇಶಿಕ ಪತ್ರಿಕೆಗಳೇ ಇದಕ್ಕೆ ಕಾರಣ. ಇಂತಹ ಪತ್ರಿಕೆಗಳನ್ನು ಕಟ್ಟುವಲ್ಲಿ ಪತ್ರಕರ್ತ ಹರೀಶ್ ಬಂದಗದ್ದೆ ಪಾತ್ರ ಪ್ರಮುಖವಾದದು’ ಎಂದು ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್ ಬಣ್ಣಿಸಿದರು.</p>.<p>ಹರೀಶ್ ಅವರು ಪತ್ರಿಕಾ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಆಯೋಜಿಸಿದ್ದ ‘ಹರೀಶ 60ರ ಹರುಷ’ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.</p>.<p>‘ಪತ್ರಿಕೋದ್ಯಮದಲ್ಲಿ ಹರೀಶ್ ಅಜ್ಞಾತ ಹೀರೊ. ಅವರು ಎಲೆಮರೆಯ ಕಾಯಿಯಂತೆ ಕೆಲಸ ಮಾಡಿದವರು. ತಮ್ಮ ವೃತ್ತಿ ಅನುಭವಗಳ ಕುರಿತು ಪುಸ್ತಕ ಬರೆಯ ಬೇಕು’ ಎಂದರು.</p>.<p>ವಾಗ್ಮಿ ಪ್ರೊ.ಕೃಷ್ಣೇಗೌಡ ಮಾತನಾಡಿ, ‘ಇಂದು ಎಲ್ಲ ರಂಗದಲ್ಲೂ ಲಾಭ– ನಷ್ಟವೇ ಪ್ರಧಾನವಾಗಿದೆ. ಸೂಕ್ಷ್ಮ ಸಂವೇದನೆ ಹೊಂದಿರುವ ವ್ಯಕ್ತಿ ನಿವೃತ್ತಿಯಾಗುವ ಮೂಲಕ ಇವುಗಳಿಂದ ಸ್ವಾತಂತ್ರ್ಯ ಪಡೆಯಲು ಇಚ್ಛಿಸುತ್ತಾನೆ. ಹೀಗಾಗಿ, ನಿವೃತ್ತಿ ಬದುಕು ಸುಂದರ ಅನುಭವ ನೀಡುತ್ತದೆ’ ಎಂದರು.</p>.<p>ಸನ್ಮಾನ ಸ್ವೀಕರಿಸಿದ ಹರೀಶ್, ‘1977ರಲ್ಲಿ ಮೈಸೂರಿಗೆ ಬಂದೆ. 42 ವರ್ಷ ಪತ್ರಿಕಾ ವೃತ್ತಿ ಮಾಡಿದ್ದು ತೃಪ್ತಿ ತಂದಿದೆ. ಬದಲಾಗಿರುವ ಪತ್ರಿಕಾರಂಗದ ವಾತಾವರಣಕ್ಕೆ ಹೊಂದಿಕೊಳ್ಳುವುದು ಕಷ್ಟಕರ. ಹೀಗಾಗಿ, ನಿವೃತ್ತಿ ಪಡೆಯಲು ಹಂಬಲಿಸಿದೆ’ ಎಂದು ಹೇಳಿದರು.</p>.<p>ಶಾಸಕ ಜಿ.ಟಿ.ದೇವೇಗೌಡ, ಮುಖಂಡ ಎಚ್.ವಿಶ್ವನಾಥ್, ವಾಸು, ಪತ್ರಕರ್ತರಾದ ಅಂಶಿ ಪ್ರಸನ್ನಕುಮಾರ್, ಸಿ.ಕೆ.ಮಹೇಂದ್ರ, ಈಚನೂರು ಕುಮಾರ್ ಇತರರು ಹರೀಶ್ ಅವರ ಒಡನಾಟವನ್ನು ಸ್ಮರಿಸಿ, ಶುಭ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>