<p><strong>ಮೈಸೂರು: </strong>ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗೆ ಮೀಸಲು ನಿಗದಿಗೊಳಿಸುತ್ತಿದ್ದಂತೆ ಬಹುತೇಕ ಪಕ್ಷಗಳ ಕಾರ್ಯಕರ್ತರಲ್ಲಿ ಭುಗಿಲೆದ್ದ ಅಸಮಾಧಾನ ಕರಗಿಲ್ಲ. ಹಳೆಯ ಮೀಸಲಾತಿಯೇ ಹೆಚ್ಚಿನ ಕ್ಷೇತ್ರಗಳಲ್ಲಿ ಈ ಬಾರಿಯೂ ಮುಂದುವರಿದಿದೆ ಎಂಬ ಆರೋಪ ಕೇಳಿ ಬಂದಿದೆ. ಅವಕಾಶ ವಂಚಿತರು ಸಾಲು ಸಾಲು ಆಕ್ಷೇಪಗಳನ್ನು ಸಲ್ಲಿಸುತ್ತಿದ್ದಾರೆ.</p>.<p>ತಾಲ್ಲೂಕು ವಿಭಜನೆಯಿಂದ ಅರ್ಧದಷ್ಟು ಸ್ಥಾನಗಳನ್ನು ಕಳೆದುಕೊಂಡಿರುವ ಎಚ್.ಡಿ.ಕೋಟೆಯಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹೆಚ್ಚಿನ ಮೀಸಲಾತಿ ಇದೆ. ಆದರೆ, ತಾಲ್ಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಇಲ್ಲದಿರುವುದು ಆ ವರ್ಗಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.</p>.<p>ಈ ಕುರಿತು ‘ಪ್ರಜಾವಾಣಿ’ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ತಾಲ್ಲೂಕು ಅಧ್ಯಕ್ಷರನ್ನು ಸಂಪರ್ಕಿಸಿದಾಗ, ’ಅಸಮಾಧಾನ ಇರುವುದು ನಿಜ’ ಎಂದರು.</p>.<p>‘ಕ್ಯಾತನಹಳ್ಳಿ ಹಿಂದೆ ಹಂಪಾಪುರ ಕ್ಷೇತ್ರದಲ್ಲಿತ್ತು. ಆಗಲೂ ಸಾಮಾನ್ಯ. ಈಗಲೂ ಸಾಮಾನ್ಯ ಮಹಿಳೆಗೆ ಮೀಸಲಾತಿ ನಿಗದಿಯಾಗಿದೆ. ಜಿ.ಬಿ.ಸರಗೂರು ತಾಲ್ಲೂಕು ಪಂಚಾಯಿತಿ ಸಾಮಾನ್ಯ ಮಹಿಳೆಗೆ ಹೋದ ಬಾರಿ ಮೀಸಲಾಗಿತ್ತು. ಆದರೆ, ಈಗಲೂ ಇದೇ ಮೀಸಲಾತಿ ಮುಂದುವರಿದಿದೆ. ಈ ಬಗೆಯ ಹಲವು ಉದಾಹರಣೆಗಳು ತಾಲ್ಲೂಕಿನಲ್ಲಿ ಸಿಗುತ್ತವೆ. ಹಾಗಾದರೆ, ಅರ್ಹತೆ ಇರುವ ಉಳಿದ ಪಂಗಡಗಳ ಕಾರ್ಯಕರ್ತರು ಏನು ಮಾಡಬೇಕು’ ಎಂದು ಕಾಂಗ್ರೆಸ್ನ ತಾಲ್ಲೂಕು ಘಟಕದ ಅಧ್ಯಕ್ಷ ಮಾದಪ್ಪ ಪ್ರಶ್ನಿಸುತ್ತಾರೆ.</p>.<p>ಚಿಕ್ಕರೆಯೂರು ತಾಲ್ಲೂಕು ಪಂಚಾಯಿತಿ ಕ್ಷೇತ್ರ ಕಳೆದ ಬಾರಿ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಹೊಮ್ಮರಗಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರೆ, ಅದರ ತಾಲ್ಲೂಕು ಪಂಚಾಯಿತಿ ಕ್ಷೇತ್ರವೂ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಈ ತಾಲ್ಲೂಕು ಪಂಚಾಯಿತಿ ಕ್ಷೇತ್ರವೂ ಕಳೆದ ಬಾರಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಮೀಸಲಾತಿಯಲ್ಲಿ ವೈವಿಧ್ಯತೆಯನ್ನು ಕಾಪಾಡಿಕೊಳ್ಳದೇ ಇರುವುದೂ ಕಾರ್ಯಕರ್ತರ ಅಸಮಾಧಾನವನ್ನು ಹೆಚ್ಚಿಸಿದೆ.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಕಳೆದ ಬಾರಿ ಇದ್ದ 5 ಕ್ಷೇತ್ರಗಳ ಪೈಕಿ 4 ಮಾತ್ರ ಈಗ ಉಳಿದುಕೊಂಡಿದೆ. ಉಳಿದ ಕ್ಷೇತ್ರಗಳನ್ನು ಸರಗೂರು ತಾಲ್ಲೂಕಿಗೆ ಸೇರಿಸಲಾಗಿದೆ. 4 ಕ್ಷೇತ್ರಗಳ ಪೈಕಿ ಸಾಮಾನ್ಯ 1, ಸಾಮಾನ್ಯ ಮಹಿಳೆ 2, ಪರಿಶಿಷ್ಟ ಪಂಗಡಕ್ಕೆ 1 ಮೀಸಲಾಗಿದೆ.</p>.<p>ತಾಲ್ಲೂಕು ಪಂಚಾಯಿತಿಯಲ್ಲಿ ಕಳೆದ ಬಾರಿ 24 ಕ್ಷೇತ್ರಗಳು ಇದ್ದವು. ಈಗ 13 ಸ್ಥಾನಗಳಷ್ಟೇ ಉಳಿದುಕೊಂಡಿವೆ. ಅವುಗಳಲ್ಲಿ ಒಂದು ಕ್ಷೇತ್ರವೂ ಹಿಂದುಳಿದ ವರ್ಗಗಳಿಗೆ ಮೀಸಲಾಗಿಲ್ಲ.</p>.<p>ಕಳೆದ ಬಾರಿ ಜಿಲ್ಲಾ ಪಂಚಾಯಿತಿಯಲ್ಲಿದ್ದ 5 ಕ್ಷೇತ್ರಗಳ ಪೈಕಿ ಜೆಡಿಎಸ್ 3ರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್, ಬಿಜೆಪಿ ತಲಾ ಒಂದರಲ್ಲಿ ಜಯ ಗಳಿಸಿದ್ದವು. ತಾಲ್ಲೂಕು ಪಂಚಾಯಿತಿಯಲ್ಲಿ ಮೊದಲ 3 ವರ್ಷ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಇತ್ತು. ನಂತರ, ಸರಗೂರು ಪ್ರತ್ಯೇಕವಾದ ಬಳಿಕ ಅಧಿಕಾರ ಕಾಂಗ್ರೆಸ್ ಪಾಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗೆ ಮೀಸಲು ನಿಗದಿಗೊಳಿಸುತ್ತಿದ್ದಂತೆ ಬಹುತೇಕ ಪಕ್ಷಗಳ ಕಾರ್ಯಕರ್ತರಲ್ಲಿ ಭುಗಿಲೆದ್ದ ಅಸಮಾಧಾನ ಕರಗಿಲ್ಲ. ಹಳೆಯ ಮೀಸಲಾತಿಯೇ ಹೆಚ್ಚಿನ ಕ್ಷೇತ್ರಗಳಲ್ಲಿ ಈ ಬಾರಿಯೂ ಮುಂದುವರಿದಿದೆ ಎಂಬ ಆರೋಪ ಕೇಳಿ ಬಂದಿದೆ. ಅವಕಾಶ ವಂಚಿತರು ಸಾಲು ಸಾಲು ಆಕ್ಷೇಪಗಳನ್ನು ಸಲ್ಲಿಸುತ್ತಿದ್ದಾರೆ.</p>.<p>ತಾಲ್ಲೂಕು ವಿಭಜನೆಯಿಂದ ಅರ್ಧದಷ್ಟು ಸ್ಥಾನಗಳನ್ನು ಕಳೆದುಕೊಂಡಿರುವ ಎಚ್.ಡಿ.ಕೋಟೆಯಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹೆಚ್ಚಿನ ಮೀಸಲಾತಿ ಇದೆ. ಆದರೆ, ತಾಲ್ಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಇಲ್ಲದಿರುವುದು ಆ ವರ್ಗಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.</p>.<p>ಈ ಕುರಿತು ‘ಪ್ರಜಾವಾಣಿ’ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ತಾಲ್ಲೂಕು ಅಧ್ಯಕ್ಷರನ್ನು ಸಂಪರ್ಕಿಸಿದಾಗ, ’ಅಸಮಾಧಾನ ಇರುವುದು ನಿಜ’ ಎಂದರು.</p>.<p>‘ಕ್ಯಾತನಹಳ್ಳಿ ಹಿಂದೆ ಹಂಪಾಪುರ ಕ್ಷೇತ್ರದಲ್ಲಿತ್ತು. ಆಗಲೂ ಸಾಮಾನ್ಯ. ಈಗಲೂ ಸಾಮಾನ್ಯ ಮಹಿಳೆಗೆ ಮೀಸಲಾತಿ ನಿಗದಿಯಾಗಿದೆ. ಜಿ.ಬಿ.ಸರಗೂರು ತಾಲ್ಲೂಕು ಪಂಚಾಯಿತಿ ಸಾಮಾನ್ಯ ಮಹಿಳೆಗೆ ಹೋದ ಬಾರಿ ಮೀಸಲಾಗಿತ್ತು. ಆದರೆ, ಈಗಲೂ ಇದೇ ಮೀಸಲಾತಿ ಮುಂದುವರಿದಿದೆ. ಈ ಬಗೆಯ ಹಲವು ಉದಾಹರಣೆಗಳು ತಾಲ್ಲೂಕಿನಲ್ಲಿ ಸಿಗುತ್ತವೆ. ಹಾಗಾದರೆ, ಅರ್ಹತೆ ಇರುವ ಉಳಿದ ಪಂಗಡಗಳ ಕಾರ್ಯಕರ್ತರು ಏನು ಮಾಡಬೇಕು’ ಎಂದು ಕಾಂಗ್ರೆಸ್ನ ತಾಲ್ಲೂಕು ಘಟಕದ ಅಧ್ಯಕ್ಷ ಮಾದಪ್ಪ ಪ್ರಶ್ನಿಸುತ್ತಾರೆ.</p>.<p>ಚಿಕ್ಕರೆಯೂರು ತಾಲ್ಲೂಕು ಪಂಚಾಯಿತಿ ಕ್ಷೇತ್ರ ಕಳೆದ ಬಾರಿ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಹೊಮ್ಮರಗಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರೆ, ಅದರ ತಾಲ್ಲೂಕು ಪಂಚಾಯಿತಿ ಕ್ಷೇತ್ರವೂ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಈ ತಾಲ್ಲೂಕು ಪಂಚಾಯಿತಿ ಕ್ಷೇತ್ರವೂ ಕಳೆದ ಬಾರಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಮೀಸಲಾತಿಯಲ್ಲಿ ವೈವಿಧ್ಯತೆಯನ್ನು ಕಾಪಾಡಿಕೊಳ್ಳದೇ ಇರುವುದೂ ಕಾರ್ಯಕರ್ತರ ಅಸಮಾಧಾನವನ್ನು ಹೆಚ್ಚಿಸಿದೆ.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಕಳೆದ ಬಾರಿ ಇದ್ದ 5 ಕ್ಷೇತ್ರಗಳ ಪೈಕಿ 4 ಮಾತ್ರ ಈಗ ಉಳಿದುಕೊಂಡಿದೆ. ಉಳಿದ ಕ್ಷೇತ್ರಗಳನ್ನು ಸರಗೂರು ತಾಲ್ಲೂಕಿಗೆ ಸೇರಿಸಲಾಗಿದೆ. 4 ಕ್ಷೇತ್ರಗಳ ಪೈಕಿ ಸಾಮಾನ್ಯ 1, ಸಾಮಾನ್ಯ ಮಹಿಳೆ 2, ಪರಿಶಿಷ್ಟ ಪಂಗಡಕ್ಕೆ 1 ಮೀಸಲಾಗಿದೆ.</p>.<p>ತಾಲ್ಲೂಕು ಪಂಚಾಯಿತಿಯಲ್ಲಿ ಕಳೆದ ಬಾರಿ 24 ಕ್ಷೇತ್ರಗಳು ಇದ್ದವು. ಈಗ 13 ಸ್ಥಾನಗಳಷ್ಟೇ ಉಳಿದುಕೊಂಡಿವೆ. ಅವುಗಳಲ್ಲಿ ಒಂದು ಕ್ಷೇತ್ರವೂ ಹಿಂದುಳಿದ ವರ್ಗಗಳಿಗೆ ಮೀಸಲಾಗಿಲ್ಲ.</p>.<p>ಕಳೆದ ಬಾರಿ ಜಿಲ್ಲಾ ಪಂಚಾಯಿತಿಯಲ್ಲಿದ್ದ 5 ಕ್ಷೇತ್ರಗಳ ಪೈಕಿ ಜೆಡಿಎಸ್ 3ರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್, ಬಿಜೆಪಿ ತಲಾ ಒಂದರಲ್ಲಿ ಜಯ ಗಳಿಸಿದ್ದವು. ತಾಲ್ಲೂಕು ಪಂಚಾಯಿತಿಯಲ್ಲಿ ಮೊದಲ 3 ವರ್ಷ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಇತ್ತು. ನಂತರ, ಸರಗೂರು ಪ್ರತ್ಯೇಕವಾದ ಬಳಿಕ ಅಧಿಕಾರ ಕಾಂಗ್ರೆಸ್ ಪಾಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>