ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ‘ಜೆಡಿಎಸ್ ಒಂದು ಪಕ್ಷವೇ ಅಲ್ಲ ಅನ್ನೋರ ಜೊತೆ ಮೈತ್ರಿ ಯಾಕೆ?’ ಎಂದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅವರು, ‘ಈಗಾಗಲೇ ಮುಖ್ಯಮಂತ್ರಿಯಾಗಿದ್ದೀನಿ ಎಂಬ ಕನಸು ಕಾಣುತ್ತಿದ್ದಾರೆ. ಮುಂದಿನ ಮುಖ್ಯಮಂತ್ರಿ ಎಂದು ಸ್ವಯಂ ಘೋಷಿಸಿಕೊಂಡಿದ್ದಾರೆ. ಜೆಡಿಎಸ್ ಬಗ್ಗೆಯೇ ತುಚ್ಛವಾಗಿ ಮಾತನಾಡುತ್ತಾರೆ. ಕಾಂಗ್ರೆಸ್ನಲ್ಲಿ ಈ ಹಿಂದೆ ಇದ್ದ ಸಂಸ್ಕೃತಿಯೇ ಬೇರೆ; ಇವರು ಹೋದ ಮೇಲೆ ಇರುವ ಸಂಸ್ಕೃತಿಯೇ ಬೇರೆ. ಅವರ ನಡವಳಿಕೆ, ಅಗೌರವದ ಎಲ್ಲ ಮಾತು ಕೇಳಿದ್ದೇವೆ’ ಎಂದು ಕಿಡಿಕಾರಿದರು.