<p><strong>ಮೈಸೂರು</strong>: ‘ಎಲ್ಲಾ ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರಚಾರ ಮಾಡಲು ನನಗೆ ಸಮಯ ಇಲ್ಲ. ಜೆಡಿಎಸ್ನಲ್ಲಿ ಶಂಖ ಊದಲೂ ಜನರಿಲ್ಲ ಎಂಬುದಾಗಿ ಈಶ್ವರಪ್ಪ ಹೇಳಿದ್ದಾರೆ. ಶಂಖ ಊದಲು ಎಲ್ಲಾ ಕಡೆ ನಾನೇ ಹೋಗಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಧಾನ ಪರಿಷತ್ ಚುನಾವಣೆಗೆ ಏಳು ಕಡೆ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಮಂಡ್ಯ ಹಾಗೂ ಕೊಡಗಿನಲ್ಲಿ ಮಾತ್ರ ಹೋರಾಟ ನಡೆಸುತ್ತೇವೆ. ಕಳೆದ ಬಾರಿ ನಾಲ್ಕು ಸ್ಥಾನ ಗೆದ್ದಿದ್ದೆವು. ಈ ಬಾರಿ ಅದಕ್ಕಿಂತ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸವಿದೆ’ ಎಂದರು.</p>.<p>‘ಪಕ್ಷಕ್ಕೆ ಯಾರೂ ಅನಿವಾರ್ಯ ಅಲ್ಲ. ಕಾರ್ಯಕರ್ತರು ಶಕ್ತಿ ತುಂಬಿ ನಾಯಕರನ್ನು ಸೃಷ್ಟಿಸುತ್ತಾರೆ’ ಎಂದು ಜಿ.ಟಿ.ದೇವೇಗೌಡ ಹಾಗೂ ಸಂದೇಶ್ ನಾಗರಾಜ್ ಅವರಿಗೆ ತಿರುಗೇಟು ನೀಡಿದರು.</p>.<p>ಸಂದೇಶ್ ನಾಗರಾಜ್ ಅವರು ಸ್ಪರ್ಧೆಯಿಂದ ಹಿಂದೆ ಸರಿದು ಎಚ್.ಡಿ.ದೇವೇಗೌಡ ಹಾಗೂ ರೇವಣ್ಣ ಅವರಿಗೆ ಮಾತ್ರ ಧನ್ಯವಾದ ಅರ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಹಿಂದೆ ಎರಡೂ ಬಾರಿ ಸ್ಪರ್ಧೆಗೆ ಸಹಾಯ ಮಾಡಿದ ದೇವೇಗೌಡ ಹಾಗೂ ರೇವಣ್ಣ ಅವರನ್ನು ಸ್ಮರಿಸಿ ಕೊಂಡಿದ್ದಾರೆ ಅಷ್ಟೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಎಲ್ಲಾ ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರಚಾರ ಮಾಡಲು ನನಗೆ ಸಮಯ ಇಲ್ಲ. ಜೆಡಿಎಸ್ನಲ್ಲಿ ಶಂಖ ಊದಲೂ ಜನರಿಲ್ಲ ಎಂಬುದಾಗಿ ಈಶ್ವರಪ್ಪ ಹೇಳಿದ್ದಾರೆ. ಶಂಖ ಊದಲು ಎಲ್ಲಾ ಕಡೆ ನಾನೇ ಹೋಗಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಧಾನ ಪರಿಷತ್ ಚುನಾವಣೆಗೆ ಏಳು ಕಡೆ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಮಂಡ್ಯ ಹಾಗೂ ಕೊಡಗಿನಲ್ಲಿ ಮಾತ್ರ ಹೋರಾಟ ನಡೆಸುತ್ತೇವೆ. ಕಳೆದ ಬಾರಿ ನಾಲ್ಕು ಸ್ಥಾನ ಗೆದ್ದಿದ್ದೆವು. ಈ ಬಾರಿ ಅದಕ್ಕಿಂತ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸವಿದೆ’ ಎಂದರು.</p>.<p>‘ಪಕ್ಷಕ್ಕೆ ಯಾರೂ ಅನಿವಾರ್ಯ ಅಲ್ಲ. ಕಾರ್ಯಕರ್ತರು ಶಕ್ತಿ ತುಂಬಿ ನಾಯಕರನ್ನು ಸೃಷ್ಟಿಸುತ್ತಾರೆ’ ಎಂದು ಜಿ.ಟಿ.ದೇವೇಗೌಡ ಹಾಗೂ ಸಂದೇಶ್ ನಾಗರಾಜ್ ಅವರಿಗೆ ತಿರುಗೇಟು ನೀಡಿದರು.</p>.<p>ಸಂದೇಶ್ ನಾಗರಾಜ್ ಅವರು ಸ್ಪರ್ಧೆಯಿಂದ ಹಿಂದೆ ಸರಿದು ಎಚ್.ಡಿ.ದೇವೇಗೌಡ ಹಾಗೂ ರೇವಣ್ಣ ಅವರಿಗೆ ಮಾತ್ರ ಧನ್ಯವಾದ ಅರ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಹಿಂದೆ ಎರಡೂ ಬಾರಿ ಸ್ಪರ್ಧೆಗೆ ಸಹಾಯ ಮಾಡಿದ ದೇವೇಗೌಡ ಹಾಗೂ ರೇವಣ್ಣ ಅವರನ್ನು ಸ್ಮರಿಸಿ ಕೊಂಡಿದ್ದಾರೆ ಅಷ್ಟೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>