ಗುರುವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿ, ‘ವಿರೋಧ ಪಕ್ಷಗಳು ಟೀಕಿಸುವಂತೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನಿ ಅಲ್ಲ. ಎಲ್ಲ ವಿಚಾರಗಳಲ್ಲೂ ಅವರು ಸ್ಪಷ್ಟತೆಯಿಂದ ಮಾತನಾಡಬಲ್ಲರು. ಕಾಂಗ್ರೆಸ್, ಜೆಡಿಎಸ್ನವರಿಗೆ ಕಾನೂನು, ಪ್ರಜಾಪ್ರಭುತ್ವ ಅಂದರೆ ಏನೆಂಬುದೇ ಗೊತ್ತಿಲ್ಲ. ನಾವು ಸಮಾಜದ ಏಳಿಗೆಗೆ ಕೆಲಸ ಮಾಡಿದರೆ, ಅವರು ಕುಟುಂಬಕ್ಕಾಗಿ ಕೆಲಸ ಮಾಡುವರು’ ಎಂದು ತಿರುಗೇಟು ನೀಡಿದರು.