ಮಕ್ಕಳಾಗಲಿಲ್ಲ ಎಂದು ಕೊರಗುತ್ತಿದ್ದ ಮಹೇಶ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಗುರುವಾರ ರಾತ್ರಿ ವಿದ್ಯಾರಣ್ಯಪುರಂನಲ್ಲಿನ ತನ್ನ ತಾಯಿ ಮನೆಗೆ ಬಂದಿದ್ದರು. ಮಹಡಿ ಮೇಲಿನ ಕೊಠಡಿಯಲ್ಲಿ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ ಎಂದು ವಿದ್ಯಾರಣ್ಯಪುರಂ ಪೊಲೀಸರು ತಿಳಿಸಿದ್ದಾರೆ.
ಮಹೇಶ್ ಅವರ ತಂದೆ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲಸದಲ್ಲಿದ್ದಾಗಲೇ ಅಕಾಲಿಕ ಮರಣಕ್ಕೀಡಾಗಿದ್ದರು. ಅನುಕಂಪದ ಆಧಾರದ ಮೇಲೆ ಇಲಾಖೆಯಲ್ಲಿ ಮಹೇಶ್ ಕೆಲಸ ಪಡೆದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.