ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಣು ಹಾಕಿಕೊಂಡು ಹೆಡ್‌ಕಾನ್‌ಸ್ಟೆಬಲ್‌ ಸಾವು

Last Updated 12 ಡಿಸೆಂಬರ್ 2020, 6:25 IST
ಅಕ್ಷರ ಗಾತ್ರ

ಮೈಸೂರು: ಮಕ್ಕಳಾಗಲಿಲ್ಲವೆಂಬ ಕೊರಗಿನಿಂದಲೇ ನಗರದ ವಿದ್ಯಾರಣ್ಯಪುರಂನ ಮನೆಯೊಂದರಲ್ಲಿ ಹೆಡ್‌ಕಾನ್‌ಸ್ಟೆಬಲ್‌ ಒಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಕ್ಷ್ಮೀಪುರಂ ಪೊಲೀಸ್‌ ಠಾಣೆಯ ಮಹೇಶ್‌ (39) ಆತ್ಮಹತ್ಯೆ ಮಾಡಿಕೊಂಡವರು.

ಮಕ್ಕಳಾಗಲಿಲ್ಲ ಎಂದು ಕೊರಗುತ್ತಿದ್ದ ಮಹೇಶ್‌ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಗುರುವಾರ ರಾತ್ರಿ ವಿದ್ಯಾರಣ್ಯಪುರಂನಲ್ಲಿನ ತನ್ನ ತಾಯಿ ಮನೆಗೆ ಬಂದಿದ್ದರು. ಮಹಡಿ ಮೇಲಿನ ಕೊಠಡಿಯಲ್ಲಿ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ ಎಂದು ವಿದ್ಯಾರಣ್ಯಪುರಂ ಪೊಲೀಸರು ತಿಳಿಸಿದ್ದಾರೆ.

ಮಹೇಶ್‌ ಅವರ ತಂದೆ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲಸದಲ್ಲಿದ್ದಾಗಲೇ ಅಕಾಲಿಕ ಮರಣಕ್ಕೀಡಾಗಿದ್ದರು. ಅನುಕಂಪದ ಆಧಾರದ ಮೇಲೆ ಇಲಾಖೆಯಲ್ಲಿ ಮಹೇಶ್‌ ಕೆಲಸ ಪಡೆದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT