ಆರೋಗ್ಯ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಲಕ್ಷ್ಮಿ ಮಾತನಾಡಿ, ‘ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಸಾಂಕ್ರಾಮಿಕ ರೋಗದ ನಡುವೆಯೂ ರಜೆ ಇಲ್ಲದೆ ಸರ್ಕಾರದ ಎಲ್ಲಾ ಆದೇಶವನ್ನು ಪಾಲಿಸುತ್ತಿದ್ದೇವೆ. ಕೋವಿಡ್ ಸಂಕಷ್ಟದಲ್ಲೂ ವೈದ್ಯರು ಸೂಚಿಸುವ ಎಲ್ಲಾ ಕೆಲಸ ನಿರ್ವಹಿಸಿದ್ದರೂ ಗುತ್ತಿಗೆ ಸಿಬ್ಬಂದಿಗೆ ಯಾವುದೇ ರೀತಿ ಧನ ಸಹಾಯ ಇಲ್ಲವಾಗಿದೆ’ ಎಂದರು.