ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಉಪಾಧ್ಯಕ್ಷ ರಾಜೇಶ್, ‘ಜಿಲ್ಲಾ ಆರೋಗ್ಯಾಧಿಕಾರಿ ಮಾತ್ರವಲ್ಲ ಜಿ.ಪಂ ಸಿಇಒ ಸಹ ನಮ್ಮನ್ನು ಬೆದರಿಸುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ನಾವೇನೂ ಲಕ್ಷಗಟ್ಟಲೆ ಸಂಬಳ ಕೊಡಿ ಎಂದು ಕೇಳುತ್ತಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಿ, ಉದ್ಯೋಗ ಭದ್ರತೆ ನೀಡಿ ಎಂದು ಮನವಿ ಮಾಡುತ್ತಿದ್ದೇವೆ. ವೈದ್ಯಕೀಯ ಸೇವೆಗಳಿಗೆ ವ್ಯತ್ಯಯ ಉಂಟಾದರೂ ಸರ್ಕಾರ ಕನಿಷ್ಠ ಮಾತುಕತೆಗೂ ಕರೆದಿಲ್ಲ. ಭಾನುವಾರವೂ ನಮ್ಮ ಮುಷ್ಕರ ಮುಂದುವರಿಯಲಿದೆ’ ಎಂದು ತಿಳಿಸಿದರು.