ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಡ- ಹೆಂಡತಿಯರೇ ಒಟ್ಟಿಗೆ ಇರಲ್ಲ, ನಾವು ಒಟ್ಟಿಗೆ ಇರೋಕೆ ಆಗುತ್ತಾ: ವಿಶ್ವನಾಥ್

Last Updated 7 ಫೆಬ್ರುವರಿ 2020, 9:29 IST
ಅಕ್ಷರ ಗಾತ್ರ

ಮೈಸೂರು: ಗಂಡ-ಹೆಂಡತಿಯರೇ ಒಟ್ಟಿಗೆ ಇರುವುದಿಲ್ಲ. ಹಾಗಿರುವಾಗ ನಾವು ಎಲ್ಲರೂ ಒಟ್ಟಿಗೆ ಇರಲು ಆಗುತ್ತಾ ಎಂದು ಬಿಜೆಪಿ ಮುಖಂಡ ಅಡಗೂರು ಎಚ್.ವಿಶ್ವನಾಥ್ ಪ್ರಶ್ನಿಸಿದರು.

ನೂತನ ಸಚಿವರ ಪ್ರಮಾಣ ವಚನಕ್ಕೆ ಸ್ವೀಕಾರ ಸಮಾರಂಭಕ್ಕೆ ಎಂ.ಟಿ.ಬಿ.ನಾಗರಾಜು ಗೈರು ಸಂಬಂಧಕ್ಕೆ ಮೈಸೂರಿನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಹಾಗೂ ಕಾಂಗ್ರೆಸ್‌ನಿಂದ ಹೊರಬಂದ ನಾವು 17 ಮಂದಿ ಇಂದಿಗೂ ಒಟ್ಟಿಗೆ ಇದ್ದೇವೆ. ಎಲ್ಲ ಸಮಯದಲ್ಲಿ ತಬ್ಬಿಕೊಂಡಿರಲು ಸಾಧ್ಯವಿಲ್ಲ.ಕೆಲ ಸಮಯದಲ್ಲಿ ಒಬ್ಬರು-ಇಬ್ಬರು ಮಿಸ್ ಆಗುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು 17 ಮಂದಿ ಇಂದಿಗೂ ಅರ್ಹರಲ್ಲ ಎಂದು ಹೇಳುತ್ತಾರೆ.ಎಲ್ಲರೂ ಸಂವಿಧಾನದ ಅನುಸಾರವಾಗಿಯೇ ಚುನಾವಣೆಯಲ್ಲಿ ಗೆದ್ದು ಬಂದಿದ್ದಾರೆ. ಜನರಿಂದ ಆದೇಶ ಪಡೆದು ಗೆದ್ದನಂತರವೇ ಮಂತ್ರಿಗಳಾಗಿದ್ದಾರೆ. ವಿರೋಧ ಪಕ್ಷದ ನಾಯಕರಾದ ಮಾತ್ರಕ್ಕೆ ಪ್ರತಿಯೊಂದನ್ನು ಟೀಕೆ ಮಾಡುವುದು ಸರಿಯಲ್ಲ. ಎಲ್ಲರೂ ಹಣ ನೀಡಿ ಗೆದ್ದು ಬಂದಿದ್ದಾರೆ ಎಂಬ ಹೇಳಿಕೆಯ ಅರ್ಥವೇನು ? ಹಾಗಾದರೆ ಸಿದ್ದರಾಮಯ್ಯ ಕೂಡ ಹಣ ನೀಡಿ ಗೆದ್ದು ಬಂದಿದ್ದಾರಾ ಎಂದು ತಿರುಗೇಟು ನೀಡಿದರು.

ಪ್ರಜಾಪ್ರಭುತ್ವದ ಅಪಾಯದಲ್ಲಿದೆ ಎಂದು ಬೊಬ್ಬೆ ಹೊಡೆಯುವ ಸಿದ್ದರಾಮಯ್ಯ ಅವರು ಸಂವಿಧಾನದ ಪ್ರಕಾರ ಅರ್ಹರಾಗಿರುವ ಶಾಸಕರನ್ನು ಅನರ್ಹರು ಎನ್ನುವುದು ಸಂವಿಧಾನಕ್ಕೆ ತೋರುವ ಅಗೌರವವಲ್ಲವೇ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT