ಹುಣಸೂರು (ಮೈಸೂರು): ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ನಡೆದ ಪ್ರಚಾರ ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ನಿರ್ದಿಷ್ಟ ಜಾತಿಯ ಹೆಸರು ಉಲ್ಲೇಖಿಸಿ ಮತಯಾಚಿಸಿದ್ದಾರೆ ಎಂದು ಇಲ್ಲಿನ ಪಟ್ಟಣ ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ದಾಖಲಾಗಿದೆ.
ಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿ ಆಧರಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಬಸವರಾಜು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. ಇದೇ ಸ್ವರೂಪದ ಪ್ರಕರಣವನ್ನು ಕಾಂಗ್ರೆಸ್ ಮುಖಂಡ ಶಿವರಾಜ ಎಸ್.ತಂಗಡಿ ವಿರುದ್ಧವೂ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.