ಈ ಸಂಬಂಧ ಡಿವೈಎಸ್ಪಿ ಸುಂದರ್ ರಾಜ್ ಮಾತನಾಡಿ, ‘ಪ್ರತಿಭಟನಾಕಾರರಿಗೆ ಮನವೊಲಿಸಿದ್ದು, ನಾಡಹಬ್ಬಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಲಾಗಿತ್ತು. ಪ್ರತಿಭಟನೆ ಮಾಡಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಗ್ರಾಮೀಣ ದಸರಾ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಹೆಚ್ಚುವರಿಯಾಗಿ 100 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ’ ಎಂದರು.