ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ವಿಶ್ವನಾಥ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ಗೆ ಸೇರ್ಪಡೆಯಾಗಿದ್ದರು. ತೆನೆ ಹೊತ್ತ ಮಹಿಳೆ ಕೈ ಹಿಡಿದು ಮತದಾರರ ಮನೆ ಬಾಗಿಲಿಗೆ ತೆರಳಿದ್ದರು. ಚುನಾವಣೆಯಲ್ಲಿ ಗೆಲುವೂ ಸಾಧಿಸಿದ್ದರು. ಈಗ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮತದಾರರಿಗೆ ಚಿಹ್ನೆ ಗೊಂದಲ ಆಗಬಹುದು ಎಂಬ ಕಾರಣದಿಂದ ಕಮಲದ ಚಿಹ್ನೆಯನ್ನು ಮತದಾರರ ಮನಸ್ಸಿನಲ್ಲಿ ಬಿತ್ತಲು ಪ್ರಯತ್ನ ಪಡುತ್ತಿದ್ದಾರೆ.