‘ಒಂದು ಕಡೆ ಖಾಸಗಿ ಕಂಪನಿಯವರು ನೀಡುವ ಹೈಬ್ರಿಡ್ ಭತ್ತದ ಕಡೆಗೆ ರೈತರು ವಾಲುತ್ತಿದ್ದಾರೆ. ಮತ್ತೊಂದೆಡೆ, ಭತ್ತ ಲಾಭದಾಯಕವಾಗಿ ಉಳಿದಿಲ್ಲ ಎಂದು ಬೆಳೆಯುವುದನ್ನು ಕಡಿಮೆ ಮಾಡಿ ಅಡಿಕೆ, ತೆಂಗು, ಬಾಳೆ, ತರಕಾರಿ, ಶುಂಠಿ ಕಡೆ ಹಲವು ರೈತರು ವಾಲುತ್ತಿದ್ದಾರೆ. ತಾಲ್ಲೂಕಿನಲ್ಲಿ ಭತ್ತದ ಬೆಳೆ ಶೇ 5ರಷ್ಟು ಕಡಿಮೆಯಾಗಿದೆ’ ಎಂದು ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.