ಪ್ರವಾಹ ಪರಿಸ್ಥಿತಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ‘ಕಳೆದ ವರ್ಷ ಕೊಡಗಿನಲ್ಲಿ ಮಳೆ ಬಂದಾಗ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೆ. ನೀರು ಕೇಳುವ ತಮಿಳುನಾಡಿನಿಂದ ಕೊಡಗಿಗೆ ಹಣ ಕೇಳಿ ಎಂದಿದ್ದೆ. ನನ್ನ ಪತ್ರಕ್ಕೆ ಉತ್ತರವನ್ನೂ ಬರೆಯಲಿಲ್ಲ, ಅದನ್ನು ಗಂಭೀರವಾಗಿಯೂ ಪರಿಗಣಿಸಲಿಲ್ಲ. ಈಗಲೂ ಅದೇ ಒತ್ತಾಯ ಮಾಡುತ್ತೇನೆ. ರಾಜ್ಯದಲ್ಲಿ ನೆರೆ ಬಂದಿದೆ. ನಮ್ಮ ಬಳಿ ಇಲ್ಲದಿದ್ದಾಗಲೂ ನೀರು ಕೇಳುವ ತಮಿಳುನಾಡಿನ ನಿಲುವು ಏನು ಎಂದು ಕೇಳಿ. ಈ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪಿಸಿದರೆ ನಾಳೆ ಉಪಯೋಗಕ್ಕೆ ಬರಲಿದೆ’ ಎಂದರು.