ಕೇಂದ್ರ ಸರ್ಕಾರ ಮಹದಾಯಿ ಕುರಿತಂತೆ ಗೆಜೆಟ್ ಅಧಿಸೂಚನೆ ಹೊರಡಿಸಿರುವುದು ರಾಜ್ಯಕ್ಕೆ ತಕ್ಷಣಕ್ಕೆ ಅನುಕೂಲಕರವಾಗಿದೆ. ಆದರೆ ತೃಪ್ತಿ ಇಲ್ಲ. ಕುಡಿಯುವ ನೀರಿಗೆ ಅನುಕೂಲ ಆಗಬಹುದು. ಆದರೆ ಶಾಶ್ವತ ಆದೇಶ ರಾಜ್ಯದ ಪರ ಬರಬೇಕು. ಅದಕ್ಕಾಗಿ ಅಂತಿಮ ತೀರ್ಪು ಬರಲಿ. ಬಜೆಟ್ ಕುರಿತಂತೆ ಚರ್ಚೆ ನಡೆಯಬೇಕು ಎಂಬುದೇ ನಮ್ಮ ಆಶಯ. ಯಾವುದೇ ಹೇಳಿಕೆಗಳ ಚರ್ಚೆ ಬೇಡ. ಹಣಕಾಸು ಅಭಿವೃದ್ಧಿ ಬಗ್ಗೆ ಶಾಸನ ಸಭೆಯಲ್ಲಿ ಚರ್ಚೆ ನಡೆಯಲಿ. ಈ ಸಂಬಂಧ ವಿರೋಧ ಪಕ್ಷಗಳೊಟ್ಟಿಗೆ ಮಾತನಾಡುತ್ತೇನೆ ಎಂದು ತಿಳಿಸಿದರು.