<p><strong>ಮೈಸೂರು</strong>: ‘ನನಗೆ ಮೈಸೂರು ತವರೂರಿನ ಭಾವನೆ ಮೂಡಿಸಿದೆ. ಜನರ ಸಾಕಷ್ಟು ಪ್ರೀತಿ ತೋರಿಸಿ, ಮಗಳಂತೆ ನೋಡಿಕೊಂಡಿದ್ದಾರೆ. ಥ್ಯಾಂಕ್ಯೂ ಮೈಸೂರು’ ಎಂದು ರೋಹಿಣಿ ಸಿಂಧೂರಿ ಸೋಮವಾರ ಇಲ್ಲಿ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವರ್ಗಾವಣೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಒಳ್ಳೆಯ ಕೆಲಸ ಮಾಡುವಂಥ ಸಂದರ್ಭದಲ್ಲಿ ದಿಢೀರನೇ ಆದ ಬೆಳವಣಿಗೆ ಇದು’ ಎಂದರು.</p>.<p>‘ಹತಾಶೆ ಹಾಗೂ ಅಭದ್ರತೆಯಿಂದ ವರ್ತಿಸಿದ ಶಿಲ್ಪಾನಾಗ್ ಅವರ ಬಗ್ಗೆ ನನಗೆ ಅನುಕಂಪವಿದೆ. ಅಧಿಕಾರಿಯನ್ನು ವರ್ಗಾವಣೆ ಮಾಡಿ ಗುರಿ ಸಾಧಿಸಿದ್ದೇನೆ ಅಂದುಕೊಳ್ಳುವುದು ತುಂಬಾ ತಪ್ಪು. ಜಿಲ್ಲೆಯಲ್ಲಿ ಏನು ನಡೆದಿದೆ, ಏಕಾಗಿ ನಡೆದಿದೆ ಎಂಬುದು ಈಗ ಸಾರ್ವಜನಿಕರಿಗೆ ಗೊತ್ತಾಗಿದೆ. ಯಾವುದೇ ಜಿಲ್ಲೆಯಲ್ಲಿ ಈ ರೀತಿ ಘಟನೆಗಳು ಸಂಭವಿಸಿದರೆ ವ್ಯವಸ್ಥೆ ನಿಭಾಯಿಸಿಕೊಂಡು ಹೋಗುವುದು ಕಷ್ಟ’ ಎಂದು ಹೇಳಿದರು.</p>.<p>‘ಎಲ್ಲರನ್ನೂ ಕರೆದು ನಾಟಕವಾಡುವುದು, ರಾಜೀನಾಮೆ ವಾಪಸ್ ಪಡೆಯುವುದು. ಈ ರೀತಿ ಮಾಡಿದರೆ ಹೇಗೆ? ಇದನ್ನು ಶಿಲ್ಪಾನಾಗ್ ಅವರು ಅವಲೋಕನ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಯಾರನ್ನೋ ನಾಲ್ಕು ಮಂದಿ ಬೆಂಬಲಿಗರನ್ನು ಕಟ್ಟಿಕೊಂಡು, ಅವರ ಮಾತನ್ನು ಕೇಳಿಕೊಂಡು ನಾನು ಕೆಲಸ ಮಾಡುವುದಿಲ್ಲ. ಯಾವುದೇ ವ್ಯವಸ್ಥೆಯಲ್ಲಿ ಅದು ಒಳ್ಳೆಯ ಬೆಳವಣಿಗೆ ಅಲ್ಲ’ ಎಂದರು.</p>.<p>ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿಯಾಗಿ ಶುಭ ಕೋರಿದರು.</p>.<p>‘ಕೋವಿಡ್ ಸಂಬಂಧ ಏನೆಲ್ಲಾ ಕೆಲಸಗಳು ನಡೆದಿವೆ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇನೆ. ವಸ್ತುಸ್ಥಿತಿ ತಿಳಿಸಿದ್ದೇನೆ. ನನ್ನ ವರ್ಗಾವಣೆ ಆದ ಮೇಲೆ ಮೈಸೂರಿನ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಬೇರೆ ಪ್ರಶ್ನೆಗೆ ಉತ್ತರಿಸುವುದಿಲ್ಲ’ ಎಂದು ಕಾರು ಹತ್ತಿ ಹೊರಟರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/chamarajanagara/did-rohini-sindhuri-block-supply-of-medical-oxygen-chamarajanagara-audio-viral-836530.html" itemprop="url">ಚಾಮರಾಜನಗರ ಜಿಲ್ಲೆಗೆ ಆಮ್ಲಜನಕ ಪೂರೈಕೆ ತಡೆದರೇ ರೋಹಿಣಿ ಸಿಂಧೂರಿ?</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ನನಗೆ ಮೈಸೂರು ತವರೂರಿನ ಭಾವನೆ ಮೂಡಿಸಿದೆ. ಜನರ ಸಾಕಷ್ಟು ಪ್ರೀತಿ ತೋರಿಸಿ, ಮಗಳಂತೆ ನೋಡಿಕೊಂಡಿದ್ದಾರೆ. ಥ್ಯಾಂಕ್ಯೂ ಮೈಸೂರು’ ಎಂದು ರೋಹಿಣಿ ಸಿಂಧೂರಿ ಸೋಮವಾರ ಇಲ್ಲಿ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವರ್ಗಾವಣೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಒಳ್ಳೆಯ ಕೆಲಸ ಮಾಡುವಂಥ ಸಂದರ್ಭದಲ್ಲಿ ದಿಢೀರನೇ ಆದ ಬೆಳವಣಿಗೆ ಇದು’ ಎಂದರು.</p>.<p>‘ಹತಾಶೆ ಹಾಗೂ ಅಭದ್ರತೆಯಿಂದ ವರ್ತಿಸಿದ ಶಿಲ್ಪಾನಾಗ್ ಅವರ ಬಗ್ಗೆ ನನಗೆ ಅನುಕಂಪವಿದೆ. ಅಧಿಕಾರಿಯನ್ನು ವರ್ಗಾವಣೆ ಮಾಡಿ ಗುರಿ ಸಾಧಿಸಿದ್ದೇನೆ ಅಂದುಕೊಳ್ಳುವುದು ತುಂಬಾ ತಪ್ಪು. ಜಿಲ್ಲೆಯಲ್ಲಿ ಏನು ನಡೆದಿದೆ, ಏಕಾಗಿ ನಡೆದಿದೆ ಎಂಬುದು ಈಗ ಸಾರ್ವಜನಿಕರಿಗೆ ಗೊತ್ತಾಗಿದೆ. ಯಾವುದೇ ಜಿಲ್ಲೆಯಲ್ಲಿ ಈ ರೀತಿ ಘಟನೆಗಳು ಸಂಭವಿಸಿದರೆ ವ್ಯವಸ್ಥೆ ನಿಭಾಯಿಸಿಕೊಂಡು ಹೋಗುವುದು ಕಷ್ಟ’ ಎಂದು ಹೇಳಿದರು.</p>.<p>‘ಎಲ್ಲರನ್ನೂ ಕರೆದು ನಾಟಕವಾಡುವುದು, ರಾಜೀನಾಮೆ ವಾಪಸ್ ಪಡೆಯುವುದು. ಈ ರೀತಿ ಮಾಡಿದರೆ ಹೇಗೆ? ಇದನ್ನು ಶಿಲ್ಪಾನಾಗ್ ಅವರು ಅವಲೋಕನ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಯಾರನ್ನೋ ನಾಲ್ಕು ಮಂದಿ ಬೆಂಬಲಿಗರನ್ನು ಕಟ್ಟಿಕೊಂಡು, ಅವರ ಮಾತನ್ನು ಕೇಳಿಕೊಂಡು ನಾನು ಕೆಲಸ ಮಾಡುವುದಿಲ್ಲ. ಯಾವುದೇ ವ್ಯವಸ್ಥೆಯಲ್ಲಿ ಅದು ಒಳ್ಳೆಯ ಬೆಳವಣಿಗೆ ಅಲ್ಲ’ ಎಂದರು.</p>.<p>ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿಯಾಗಿ ಶುಭ ಕೋರಿದರು.</p>.<p>‘ಕೋವಿಡ್ ಸಂಬಂಧ ಏನೆಲ್ಲಾ ಕೆಲಸಗಳು ನಡೆದಿವೆ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇನೆ. ವಸ್ತುಸ್ಥಿತಿ ತಿಳಿಸಿದ್ದೇನೆ. ನನ್ನ ವರ್ಗಾವಣೆ ಆದ ಮೇಲೆ ಮೈಸೂರಿನ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಬೇರೆ ಪ್ರಶ್ನೆಗೆ ಉತ್ತರಿಸುವುದಿಲ್ಲ’ ಎಂದು ಕಾರು ಹತ್ತಿ ಹೊರಟರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/chamarajanagara/did-rohini-sindhuri-block-supply-of-medical-oxygen-chamarajanagara-audio-viral-836530.html" itemprop="url">ಚಾಮರಾಜನಗರ ಜಿಲ್ಲೆಗೆ ಆಮ್ಲಜನಕ ಪೂರೈಕೆ ತಡೆದರೇ ರೋಹಿಣಿ ಸಿಂಧೂರಿ?</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>