<p><strong>ಮೈಸೂರು:</strong> ‘ಸೂಕ್ತವಾದ ವಾತಾವರಣ ಕಂಡುಬಂದರೆ ಪೂರ್ಣ ಪ್ರಮಾಣದಲ್ಲಿ ಕಾಲೇಜುಗಳನ್ನು ಆರಂಭಿಸಲಾಗುವುದು. ಎಲ್ಲವೂ ಪರಿಸ್ಥಿತಿ ಮೇಲೆ ಅವಲಂಬಿತವಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಲ್ಲಿ ಹೇಳಿದರು.</p>.<p>‘ಈ ಶೈಕ್ಷಣಿಕ ವರ್ಷದಲ್ಲಿ ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ತರಗತಿಗಳು ನಡೆಯುತ್ತಿವೆ. ಎರಡೂ ಕಡೆ ಹಾಜರಾತಿ ತೆಗೆದುಕೊಳ್ಳಲಾಗುತ್ತಿದೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕಾಲೇಜುಗಳಲ್ಲಿ ಶೇ 50ರಷ್ಟು ಹಾಜರಾತಿಯೂ ಇಲ್ಲ. ಯಾರಿಗೂ ಹಾಸ್ಟೆಲ್ ಸಮಸ್ಯೆ ಆಗುತ್ತಿಲ್ಲ. ದೂರದ ಊರಿನಿಂದ ಬರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ನಲ್ಲಿ ಆದ್ಯತೆ ನೀಡಲಾಗುತ್ತಿದೆ. ಶೈಕ್ಷಣಿಕ ವರ್ಷ ವ್ಯರ್ಥವಾಗದಂತೆ ಉತ್ತಮ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ’ ಎಂದು ಅವರು ವಿವರಿಸಿದರು.</p>.<p>ಸರ್ಕಾರದಿಂದ ಹೊಸ ಕಾಲೇಜು, ಪಾಲಿಟೆಕ್ನಿಕ್ಗಳನ್ನು ಆರಂಭಿಸುವ ಯೋಚನೆ ಇಲ್ಲ. ಇರುವ ಸಂಸ್ಥೆಗಳ ಗುಣಮಟ್ಟ ಹೆಚ್ಚಿಸುವುದು, ಪ್ರಾಧ್ಯಾಪಕರು, ಉಪನ್ಯಾಸಕರನ್ನು ಒದಗಿಸಿ ಮೂಲಸೌಕರ್ಯ ಹೆಚ್ಚಿಸುವುದಕ್ಕೆ ಆದ್ಯತೆ ನೀಡಲಾಗುವುದು. ಆನ್ಲೈನ್ ಹಾಗೂ ಆಫ್ಲೈನ್ಗಳಲ್ಲೂ ತರಗತಿ ನಡೆಯುತ್ತಿರುವುದರಿಂದ ಅತಿಥಿ ಉಪನ್ಯಾಸಕರಿಗೂ ಅವಕಾಶ ನೀಡಲಾಗುತ್ತಿದೆ ಎಂದರು.</p>.<p>ಖಾತೆ ಬದಲಾವಣೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವರು, ಖಾತೆ ಹಂಚಿಕೆ ಮುಖ್ಯಮಂತ್ರಿಯ ಪರಮಾಧಿಕಾರ. ರಾಜಕೀಯದಲ್ಲಿ ಸಮಸ್ಯೆ, ಸವಾಲುಗಳು ಇರುತ್ತವೆ. ಅದನ್ನು ಬಗೆಹರಿಸಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಹೇಳಿದರು.</p>.<p>ರೈತರು ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು ಎಂದು ಮನವಿ ಮಾಡಿದ ಅವರು, ಕಾಯ್ದೆಗಳಿಗೆ ರೈತರ ಪರವಾಗಿರುವಂಥ ಸುಧಾರಣೆ ಮಾಡಲಾಗಿದೆ. ಅದನ್ನು ಸರಿಯಾಗಿ ಅರ್ಥೈಸಿಕೊಳ್ಳದ ಕಾರಣ ಗೊಂದಲ ಮಾಡಿಕೊಂಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸೂಕ್ತವಾದ ವಾತಾವರಣ ಕಂಡುಬಂದರೆ ಪೂರ್ಣ ಪ್ರಮಾಣದಲ್ಲಿ ಕಾಲೇಜುಗಳನ್ನು ಆರಂಭಿಸಲಾಗುವುದು. ಎಲ್ಲವೂ ಪರಿಸ್ಥಿತಿ ಮೇಲೆ ಅವಲಂಬಿತವಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಲ್ಲಿ ಹೇಳಿದರು.</p>.<p>‘ಈ ಶೈಕ್ಷಣಿಕ ವರ್ಷದಲ್ಲಿ ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ತರಗತಿಗಳು ನಡೆಯುತ್ತಿವೆ. ಎರಡೂ ಕಡೆ ಹಾಜರಾತಿ ತೆಗೆದುಕೊಳ್ಳಲಾಗುತ್ತಿದೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕಾಲೇಜುಗಳಲ್ಲಿ ಶೇ 50ರಷ್ಟು ಹಾಜರಾತಿಯೂ ಇಲ್ಲ. ಯಾರಿಗೂ ಹಾಸ್ಟೆಲ್ ಸಮಸ್ಯೆ ಆಗುತ್ತಿಲ್ಲ. ದೂರದ ಊರಿನಿಂದ ಬರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ನಲ್ಲಿ ಆದ್ಯತೆ ನೀಡಲಾಗುತ್ತಿದೆ. ಶೈಕ್ಷಣಿಕ ವರ್ಷ ವ್ಯರ್ಥವಾಗದಂತೆ ಉತ್ತಮ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ’ ಎಂದು ಅವರು ವಿವರಿಸಿದರು.</p>.<p>ಸರ್ಕಾರದಿಂದ ಹೊಸ ಕಾಲೇಜು, ಪಾಲಿಟೆಕ್ನಿಕ್ಗಳನ್ನು ಆರಂಭಿಸುವ ಯೋಚನೆ ಇಲ್ಲ. ಇರುವ ಸಂಸ್ಥೆಗಳ ಗುಣಮಟ್ಟ ಹೆಚ್ಚಿಸುವುದು, ಪ್ರಾಧ್ಯಾಪಕರು, ಉಪನ್ಯಾಸಕರನ್ನು ಒದಗಿಸಿ ಮೂಲಸೌಕರ್ಯ ಹೆಚ್ಚಿಸುವುದಕ್ಕೆ ಆದ್ಯತೆ ನೀಡಲಾಗುವುದು. ಆನ್ಲೈನ್ ಹಾಗೂ ಆಫ್ಲೈನ್ಗಳಲ್ಲೂ ತರಗತಿ ನಡೆಯುತ್ತಿರುವುದರಿಂದ ಅತಿಥಿ ಉಪನ್ಯಾಸಕರಿಗೂ ಅವಕಾಶ ನೀಡಲಾಗುತ್ತಿದೆ ಎಂದರು.</p>.<p>ಖಾತೆ ಬದಲಾವಣೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವರು, ಖಾತೆ ಹಂಚಿಕೆ ಮುಖ್ಯಮಂತ್ರಿಯ ಪರಮಾಧಿಕಾರ. ರಾಜಕೀಯದಲ್ಲಿ ಸಮಸ್ಯೆ, ಸವಾಲುಗಳು ಇರುತ್ತವೆ. ಅದನ್ನು ಬಗೆಹರಿಸಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಹೇಳಿದರು.</p>.<p>ರೈತರು ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು ಎಂದು ಮನವಿ ಮಾಡಿದ ಅವರು, ಕಾಯ್ದೆಗಳಿಗೆ ರೈತರ ಪರವಾಗಿರುವಂಥ ಸುಧಾರಣೆ ಮಾಡಲಾಗಿದೆ. ಅದನ್ನು ಸರಿಯಾಗಿ ಅರ್ಥೈಸಿಕೊಳ್ಳದ ಕಾರಣ ಗೊಂದಲ ಮಾಡಿಕೊಂಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>